Webdunia - Bharat's app for daily news and videos

Install App

ಎಸ್‌.ಎಂ.ಕೃಷ್ಣರಿಂದ ಬಿಜೆಪಿಗೆ ಆನೆ ಬಲ: ಜಗದೀಶ್ ಶೆಟ್ಟರ್

Webdunia
ಶನಿವಾರ, 4 ಫೆಬ್ರವರಿ 2017 (15:01 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪಕ್ಷ ಸೇರಿದರೆ ಸ್ವಾಗತಿಸುತ್ತೇವೆ. ಅವರ ಬರುವಿಕೆಯಿಂದ ಪಕ್ಷಕ್ಕೆ ಆನೆ ಬಲ ಬರಲಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ತೊರೆದಿರುವ ಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಅಭಿಮಾನದಿಂದ ಬಿಜೆಪಿ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಗೊಂದಲದ ವಾತಾವರಣ ಮೂಡಿದೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ದೂರಿದರು.  
 
ಸಿಎಂ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಜನವರಿ 28ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ರಾಜಕೀಯ ಪಕ್ಷಗಳು ಕೃಷ್ಣ ಅವರಿಗೆ ಗಾಳ ಹಾಕುತ್ತಿದ್ದು, ಅವರು ಯಾವ ಪಕ್ಷ ಸೇರ್ಪಡೆಯಾಗುತ್ತಾರೆ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments