Webdunia - Bharat's app for daily news and videos

Install App

ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ಹರಕೆಯ ಕುರಿಯಾಗಲಿದ್ದಾರೆ : ಹೆಚ್.ಡಿ.ಕೆ

Webdunia
ಶುಕ್ರವಾರ, 13 ಜನವರಿ 2023 (13:05 IST)
ಕಲಬುರಗಿ : ಕೋಲಾರ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸೇಫ್ ಕ್ಷೇತ್ರವಲ್ಲ. ಹೀಗಾಗಿ ಒಂದು ವೇಳೆ ಅವರು ಅಲ್ಲಿಂದ ಸ್ಪರ್ಧೆ ಮಾಡಿದರೆ, ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕೋಲಾರದಲ್ಲಿ ನಿಲ್ಲಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದರು.

ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ ಇಲ್ಲ. ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ ಎಂದರು.

3ಆರ್ಡಿ ಮೀಸಲಾತಿ 2ಜ ಗೆ ಸೇರ್ಪಡೆಗೆ ಹೈಕೋರ್ಟ್ ತಡೆ ವಿಚಾರವಾಗಿ ಮಾತನಾಡಿದ ಅವರು, 3ಬಿಯನ್ನು 2ಡಿ ಗೆ ಘೋಷಣೆ ಮಾಡಿ ರಂಗ ಎನ್ನುವ ಹೆಸರು ಮಂಗ ಮಾಡಿದ್ದಾರೆ. ಇವರು ಮೂಗಿಗೆ ತುಪ್ಪ ಸವರಿಲ್ಲ. ಬದಲಾಗಿ, ಹಣೆ ಮೇಲೆ ಸುರಿದ ವಾಸನೆ ಸಹ ಬಾರದಂತೆ ಮಾಡಿದ್ದಾರೆ ಎಂದ ಅವರು, ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೋಸ ಮಾಡಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments