ಸಿದ್ದರಾಮಯ್ಯನವರು ನನ್ನ ಮಾತು ಕೇಳುತ್ತಿದ್ದರೆ ಇಂದು ಎಲ್ಲ ಪಕ್ಷದ ಕಳ್ಳರು ಸಿಕ್ಕಿ ಬೀಳುತ್ತಿದ್ದರು: ಪ್ರತಾಪ್ ಸಿಂಹ

Sampriya
ಮಂಗಳವಾರ, 24 ಸೆಪ್ಟಂಬರ್ 2024 (17:05 IST)
Photo Courtesy X
ಬೆಂಗಳೂರು:  ಸಿಎಂ ಸಿದ್ದರಾಮಯ್ಯ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಹೇಮಂತ್ ಸೊರೇನ್ ಅವರ ಹಾಗೇ ಕಳಪೆ ಮಾದರಿಗಳನ್ನು ಅನುಕರಿಸದೆ ಮೌಲ್ಯಯುತ ರಾಜಕಾರಣಕ್ಕೆ ಅನುಗುಣವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ್ ಹೇಳಿದರು.

ಹೈಕೋರ್ಟ್‌ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿ ಪ್ರಾಸಿಕ್ಯೂಶನ್‌ಗೆ ವಿಚಾರಣೆಗೆ ಗುರಿಪಡಿಸಿಬೇಕೆಂದು ಅವಕಾಶ ಮಾಡಿಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ಸಿಎಂ ಸಿದ್ದರಾಮಯ್ಯ ಅವರು ತಕ್ಷಣವೇ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಒಳ್ಳೆಯ ಮೇಲ್ಪಂಕ್ತಿ ಹಾಕಿಕೊಡಬೇಕೆಂದು ಕೇಳಿಕೊಂಡರು. ಅಂದು ನಾನು ಸಿದ್ದರಾಮಯ್ಯ ಅವರಿಗೆ ಗಿಳಿಗೆ ಬುದ್ಧಿ ಹೇಳಿದ ಹಾಗೇ ಹೇಳಿದ್ದೆ. ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಮಾಡಿಕೊಂಡ 14 ಸೈಟ್‌ಗಳನ್ನು ಸೆರೆಂಡರ್ ಮಾಡಿ ಈ ಪ್ರಕರಣವನ್ನು ತನಿಖೆಗೆ ಆದೇಶ ಮಾಡಿ ಕೊಡಿ ಎಂದು ಹೇಳಿದ್ದೆ. ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳದೆ ಅವರ ಸುತ್ತ ಮುತ್ತಲಿನವರ ಮಾತು ಕೇಳಿ ಇಂದು ಸಂಕಷ್ಟದಲ್ಲಿದ್ದಾರೆ.

ಅಂದು ಸಿದ್ದರಾಮಯ್ಯನವರು ಸೈಟ್‌ಗಳನ್ನು ಸೆರೆಂಡರ್ ಮಾಡಿ ತನಿಖೆಗೆ ಒಪ್ಪಿಸುತ್ತಿದ್ದರೆ ಇಂದು ಎಲ್ಲ ಪಕ್ಷದಲ್ಲಿರುವ ಕಳ್ಳರು ಸಿಕ್ಕಿ ಬೀಳುತ್ತಿದ್ದರು. ಸಿದ್ದರಾಮಯ್ಯ  ಒಬ್ಬರಿಗೆ ಈ ಕಳಂಕ ಬರುತ್ತಿರಲಿರ್ಲಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments