Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ತಾಕತ್ತಿದ್ದರೆ ನನ್ನಂತೆ ನಿವೃತ್ತಿ ಘೋಷಿಸಲಿ : ಈಶ್ವರಪ್ಪ

Webdunia
ಬುಧವಾರ, 26 ಏಪ್ರಿಲ್ 2023 (10:19 IST)
ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ನನ್ನ ಹಾಗೆ ರಾಜಕೀಯ ನಿವೃತ್ತಿ ಘೋಷಿಸಿ ಪಕ್ಷ ಸಂಘಟನೆಯಲ್ಲಿ ತೊಡಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.
 
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರದ್ದು ಅವಕಾಶವಾದ ಹಾಗೂ ಅಧಿಕಾರ ದಾಹದ ರಾಜಕಾರಣ. ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಏಕೆ ಬಂದರು ಗೊತ್ತಾ? ಅಲ್ಲಿ ಫೇಲ್ ಆಗಿ ಅವರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸಿನಲ್ಲಿ ಅವರಿಗೆ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನ ಇಲ್ಲ ಎಂದು ಹೇಳಲಿ ಕಾಂಗ್ರೆಸ್ಸಿಗೆ ಒದ್ದು ಬರುತ್ತಾರೆ ಎಂದು ಟೀಕಿಸಿದ್ದಾರೆ. 

ಸಿದ್ದರಾಮಯ್ಯ ಅವರದ್ದು ವಿಚಾರ ಸಿದ್ಧಾಂತ ಅಲ್ಲ, ಅಧಿಕಾರದ ಸಿದ್ಧಾಂತ. ನನಗೆ ಅಧಿಕಾರವೇ ಮುಖ್ಯವಾಗಿದ್ದರೆ ಅವರಂತೆಯೇ ಮಾಡುತ್ತಿದ್ದೆ. ನಾನು ನಮ್ಮ ನಾಯಕರು ಹೇಳಿದಂತೆ ರಾಜೀನಾಮೆ ಅಲ್ಲ, ನಿವೃತ್ತಿಯಾಗಿದ್ದೇನೆ. ಈಗ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಶಿಸ್ತಿನ ಬಗ್ಗೆ ಕಲ್ಪನೆಯೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments