Select Your Language

Notifications

webdunia
webdunia
webdunia
webdunia

ಸ್ವಯಂ ದೃಢೀಕರಣ ಪತ್ರ ನೀಡಿದಲ್ಲಿ ಭಾಗ್ಯಲಕ್ಷ್ಮಿ ಬಾಂಡ್: ಗುಂಡೂರಾವ್

ಸ್ವಯಂ ದೃಢೀಕರಣ ಪತ್ರ ನೀಡಿದಲ್ಲಿ ಭಾಗ್ಯಲಕ್ಷ್ಮಿ ಬಾಂಡ್: ಗುಂಡೂರಾವ್
ಬೆಂಗಳೂರು , ಬುಧವಾರ, 25 ಮಾರ್ಚ್ 2015 (12:30 IST)
ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಡಿಯಲ್ಲಿ ನೀಡಲಾಗುವ ಬಾಂಡ್‌ಗಳನ್ನು ಪಡೆಯಲು ವಿವಾಹ ಪತ್ರ ಅಗತ್ಯವಿಲ್ಲ. ಬದಲಾಗಿ ಸ್ವಯಂ ದೃಢೀಕರಣ ಪತ್ರ ನೀಡಿ ಬಾಂಡ್‌ಗಳನ್ನು ಪಡೆಯಬಹುದಾಗಿದೆ ಎಂದು ಆಹಾರ ಮತ್ತು ನಾಗರೀಕ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ. 
 
ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಪಕ್ಷದ ಮೇಲ್ಮನೆ ಸದಸ್ಯ ಬಂಡಿ ಸಿದ್ದೇಗೌಡ ಅವರು ಭಾಗ್ಯಲಕ್ಷ್ಮಿ ಬಾಂಡ್ ಪಡೆಯುವ ಬಗ್ಗೆ ಮಾಹಿತಿ ಹೇಗೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಡಿಯಲ್ಲಿ ನೀಡಲಾಗುವ ಬಾಂಡ್‌ಗಳನ್ನು ಪಡೆಯಲು ವಿವಾಹ ಪತ್ರ ಕಡ್ಡಾಯವಲ್ಲ. ಬದಲಾಗಿ ಸ್ವಯಂ ದೃಢೀಕರಣ ಪತ್ರ ನೀಡಿ ಬಾಂಡ್ ಪಡೆಯಬಹುದಾಗಿದೆ ಎಂದರು. 
 
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಅವರು ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಉತ್ತರಿಸಿದರು.  

Share this Story:

Follow Webdunia kannada