Publish Date: Thu, 28 Dec 2017 (20:36 IST)
Updated Date: Thu, 28 Dec 2017 (20:37 IST)
ಸಂವಿಧಾನ ಬದಲಾವಣೆ ಮಾಡುವುದು, ಜಾತಿಗಳ ನಡುವೆ ವಿಷ ಬೀಜ ಬಿತ್ತುವುದು, ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುವುದು ಬಿಜೆಪಿಯ ಹಿಡನ್ ಅಜೆಂಡಾ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ದಂಗೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.
ತುಮಕೂರಿನ ಶಿರಾದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೇಲೆ, ಸಂವಿಧಾನದ ಮೇಲೆ ಜನರು ನಂಬಿಕೆ ಇಟ್ಟುಕೊಂಡಿದ್ದಾರೆ. ಸಂವಿಧಾನ ಬದಲಾವಣೆ ಮಾಡುವುದು ಅಷ್ಟು ಸರಳವಲ್ಲ ಎಂದಿದ್ದಾರೆ.
ನೀರಾವರಿ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ ಇಲ್ಲಿವರೆಗೂ 45 ಸಾವಿರ ಕೋಟಿ ಖರ್ಚು ಮಾಡಿದೆ. ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದ್ದು, ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ರಾಜ್ಯದ ರೈತರ 8,000 ಕೋಟಿ ಸಾಲ ಮನ್ನಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.
Hanumanthu.P
Publish Date: Thu, 28 Dec 2017 (20:36 IST)
Updated Date: Thu, 28 Dec 2017 (20:37 IST)