Webdunia - Bharat's app for daily news and videos

Install App

ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು- ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

Webdunia
ಸೋಮವಾರ, 28 ಜನವರಿ 2019 (07:24 IST)
ಮಡಿಕೇರಿ : ಜಾತಿ ಪ್ರಶ್ನೆ ಇಲ್ಲದೆ ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಡಿಕೇರಿಯಲ್ಲಿ ಪರಿವರ್ತನಾ ಟ್ರಸ್ಟ್, ಹಿಂದೂ ಜಾಗರಣ ವೇದಿಕೆ ಆಯೋಜನೆ ಮಾಡಿದ್ದ ಸಾಮಾಜಿಕ ಸಮರಸತಾ ಸಮಾವೇಶ, ಹಿಂದೂ ಐಕ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು,’ ಜಾತಿ ವಿಷಬೀಜ ಸಮಾಜದಲ್ಲಿ ಸೇರಿಕೊಂಡ ಬಳಿಕ ನಾವು ನಿರ್ಮಾಣ ಮಾಡಿದ್ದನ್ನು ನಮ್ಮದು ಎಂದು ಹೇಳಿಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದ್ದೇವೆ. ನಮ್ಮ ಹಿಂದೂಗಳು ಒಗ್ಗಟ್ಟಾಗಿ ನಿಲ್ಲದೇ ಇದ್ದರೆ ಏನಾಗುತ್ತದೆ ಎಂಬುವುದನ್ನು ಇತಿಹಾಸ ನೋಡಿದರೆ ನಮಗೆ ಅರಿವಾಗುತ್ತದೆ’ ಎಂದು ತಿಳಿಸಿದ್ದಾರೆ.


 

‘ಇತಿಹಾಸ ಬರೆಯಲು ಮುಂದಾಗಬೇಕು. ಪೌರುಷ ಇದ್ದರೆ ಇತಿಹಾಸ ಬರೆಯಿರಿ. ದೇವರಿಗೆ ದುರ್ಬಲರೇ ಬೇಕಾಗಿದ್ದು, ಅದ್ದಕ್ಕೆ ಕುರಿ-ಕೋಳಿ ಬಲಿ ಕೊಡಲಾಗುತ್ತದೆ. ಆನೆ ಹುಲಿಯನ್ನು ದೇವರಿಗೆ ಬಲಿಕೊಡ್ತಾರಾ? ಆದ್ದರಿಂದ ದುರ್ಬಲರಾಗದೇ ಶೌರ್ಯ ವ್ಯಕ್ತಿಗಳಾಗಿ ಬೆಳೆಯಿರಿ. ಹಿಂದೂ ಸಮಾಜ ಒಟ್ಟಾಗಿ ನಿಲ್ಲದೇ ಇದ್ದರೆ ಮುಂದೆ ಕಷ್ಟವಾಗುತ್ತದೆ’  ಎಂದು ಹಿಂದೂ ಸಂಘಟನೆ ಹಾಗೂ ಪ್ರಸಕ್ತ ಸಮಾಜದಲ್ಲಿ ಯುವಕರಿಗೆ ಸಲಹೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments