Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ 3 ಕ್ಕಿಂತ ಹೆಚ್ಚು ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ರಾಜಕೀಯ ನಿವೃತ್ತಿ- ಶಾಸಕ ಕೆ.ಎನ್.ರಾಜಣ್ಣ ಸವಾಲು

ಚುನಾವಣೆಯಲ್ಲಿ 3 ಕ್ಕಿಂತ ಹೆಚ್ಚು ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ರಾಜಕೀಯ ನಿವೃತ್ತಿ- ಶಾಸಕ ಕೆ.ಎನ್.ರಾಜಣ್ಣ ಸವಾಲು
ತುಮಕೂರು , ಗುರುವಾರ, 14 ಮಾರ್ಚ್ 2019 (12:37 IST)
ತುಮಕೂರು : ಜೆಡಿಎಸ್ ಎಷ್ಟು ಸೀಟ್ ಕೊಟ್ರು ಗೆಲ್ಲೋದು 2-3 ಮಾತ್ರ. 3 ಕ್ಕಿಂತ ಹೆಚ್ಚು ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಸವಾಲು ಹಾಕಿದ್ದಾರೆ.


‘ಸೀಟು ಹಂಚಿಕೆಯ ಬಗ್ಗೆ ಇನ್ನೂ ಅಂತಿಮ ನಿರ್ಣಯವಾಗಿಲ್ಲ. ಮಾರ್ಚ್ 16ರಂದು ಸೀಟು ಹಂಚಿಕೆ ಅಂತಿಮವಾಗುತ್ತೆ. ಹೀಗಾಗಿ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಮಂಡ್ಯ ಹಾಸನದಲ್ಲಿ ಜೆಡಿಎಸ್ ಗೆಲುವು ಸುಲಭವಲ್ಲ. ತುಮಕೂರಿನಲ್ಲಿ ಜೆಡಿಎಸ್ ಗೆ ಟಿಕೆಟ್ ಕೊಟ್ಟರೆ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ಕಾಂಗ್ರೆಸ್ ಉಳಿಸುವುದಕ್ಕೆ ನಾನು ಸ್ಪರ್ಧೆ ಮಾಡ್ತೇನೆ’ ಎಂದು ಅವರು ಹೇಳಿದ್ದಾರೆ.


‘ಕಾಂಗ್ರೆಸ್ ನವರು ಹೆಚ್.ಡಿ.ಡಿಯನ್ನ ಪ್ರಧಾನಿ ಮಾಡಿದ್ದರು. ಆಗ ಕರ್ನಾಟಕದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿತ್ತು. ಈಗ ಹೆಚ್.ಡಿ.ಕೆಯನ್ನ ಸಿಎಂ ಮಾಡಿ ಹಿನ್ನಡೆ ಅನುಭವಿಸ್ತಿದೆ. ಹೀಗೆ ಆದರೆ ಕಾಂಗ್ರೆಸ್ ಸಂಪೂರ್ಣ ನಿರ್ನಾಮ ಆಗಲಿದೆ. ಕಣ್ಣೀರಿಗೆ ಹೆಚ್.ಡಿ.ಡಿ. ಹೆಸರುವಾಸಿ, ಅದೇ ಅವರ ಬಂಡವಾಳ’ ಎಂದು ಅವರು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಬಿಜೆಪಿಯಿಂದ 50 ಕೋಟಿ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಪ್ರಮಾಣ ಮಾಡಿ ಹೇಳಲಿ- ಪ್ರೀಯಾಂಕ್ ಖರ್ಗೆಗೆ ಉಮೇಶ್ ಜಾಧವ್ ಸವಾಲು