ಬಾಕಿ ಹಣ ಬಿಡುಗಡೆ ಮಾಡಲಿಲ್ಲ ಅಂದರೆ ಮುಖ್ಯ ಮಂತ್ರಿ ಮನೆಗೆ ಮುತ್ತಿಗೆ ಹಾಕ್ತೇವೆ- ಕೆಂಪಣ್ಣ

Webdunia
ಮಂಗಳವಾರ, 14 ಮಾರ್ಚ್ 2023 (14:53 IST)
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ್ರು. ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಸಂದಾಯವಾಗಬೇಕಿದ್ದ ಬಾಕಿ ಮೊತ್ತ ಬಿಡುಗಡೆ ಮಾಡುವಂತೆ ಸುದ್ದಿಗೋಷ್ಠಿಯಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಒತ್ತಾಯ ಮಾಡಿದ್ದಾರೆ. 
 
ವಿವಿಧ ಇಲಾಖೆಗಳಿಂದ 22 ಸಾವಿರ ಕೋಟಿ ಗುತ್ತಿಗೆದಾರರಿಗೆ ಬಾಕಿ ಇದೆ.ಗುತ್ತಿಗೆದಾರರಿಗೆ ಬಾಕಿ ಹಣ ಉಳಿಸಿಕೊಂಡಿದ್ದಾರೆ .ಕೆಲವರಿಗೆ ಬಿಡುಗಡೆ ಮಾಡಿದ್ದಾರೆ, ಇನ್ನೂ ಕೆಲವರಿಗೆ ಬಿಡುಗಡೆ ಮಾಡಿಲ್ಲ.ಪಿಡಬ್ಲ್ಯೂಡಿ, ನೀರಾವರಿ, ಬಿಬಿಎಂಪಿ ಸೇರಿದಂತೆ  ಹಲವು ಇಲಾಖೆಯಲ್ಲಿ ಬಾಕಿ ಇದೆ .ಅವರಿಗೆ ಬೇಕಾದವರಿಗೆ ಬಿಡುಗಡೆ ಮಾಡ್ತಾ ಇದ್ದಾರೆ .ಹುಬ್ಬಳ್ಳಿ, ಧಾರಾವಾಡದಲ್ಲಿ ಚೀಫ್ ಇಂಜಿನಿಯರ್ ಬೇಕಾದವರಿಗೆ ಮಾರಾಟ ಮಾಡ್ತಾ ಇದ್ದಾರೆ.
 
 ಕಾಮಗಾರಿ ಪೂರ್ಣಗೊಳಿಸಿ ಎರಡು ವರ್ಷ ಕಳೆದರು ಹಣ ಬಿಡುಗಡೆಯಾಗುತ್ತಿಲ್ಲ.ವಿವಿಧ ಇಲಾಖೆಗಳಿಂದ 22 ಸಾವಿರ ಕೋಟಿ ಹಣ ಬಾಕಿ ಇದೆ.ಲೋಕೋಪಯೋಗಿ, ನೀರಾವರಿ, ಬಿಬಿಎಂಪಿ ಯಲ್ಲಿ ಅತಿ ಹೆಚ್ಚು ಕಾಮಗಾರಿ ಗಳು ನಡೆದಿವೆ.ಅಧಿಕಾರಿ ಮತ್ತು ರಾಜಕಾರಣಿಗಳು 7 % ಕೊಟ್ರೆ ಬಿಲ್ ಬರೀತಾರೆ.ಬೇರೆ ಜಿಲ್ಲೆಗಳಲ್ಲಿ 10/% ಕೊಟ್ರೆ ಬಿಲ್ ಮಾಡ್ತಾರೆ .ಅದ್ರಿಂದ ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಬೇಕಾದವರಿಗೆ ಮಾತ್ರ ಬಿಲ್ ಮಾಡ್ತಾರೆ.ಇದ್ರಿಂದ ಕಾಲ ಮಿತಿಯೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡಿ ಅಂತ ಕೆಂಪಣ್ಣ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments