Webdunia - Bharat's app for daily news and videos

Install App

ಪೊಲೀಸ್‌ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ

Webdunia
ಮಂಗಳವಾರ, 23 ಮೇ 2023 (21:16 IST)
ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.
ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾ ವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
 
ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ