Webdunia - Bharat's app for daily news and videos

Install App

ಹಾಲು ಉತ್ಪಾದಕರಿಗೆ ದರ ಹೆಚ್ಚಿಸದಿದ್ದಲ್ಲಿ ಹೋರಾಟ ಖಚಿತ-ನಿಶ್ಚಿತ-ಖಂಡಿತ

Sampriya
ಬುಧವಾರ, 4 ಸೆಪ್ಟಂಬರ್ 2024 (16:37 IST)
Photo Courtesy X
ಬೆಂಗಳೂರು: ಚುನಾವಣೆಗೂ ಮುನ್ನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ ₹7 ಸಬ್ಸಿಡಿ ನೀಡುತ್ತೆವೆಂದು ಬೋಗಸ್‌ ಗ್ಯಾರಂಟಿ ನೀಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಹಾಲಿನ ಖರೀದಿ ದರದಲ್ಲಿ 1.50ರೂ ಇಳಿಕೆ ಮಾಡಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ಹಾಲು ಉತ್ಪಾದಕರಿಗೆ ದರ ಹೆಚ್ಚಿಸದಿದ್ದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಹಾಲು ದರ ಇಳಿಕೆ ಸಂಬಂಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ಹೊರಹಾಕಿದ್ದರು.  ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ ಎಂದಿದ್ದರು.

ಇದೀಗ ಹಾಲಿನ ದರ ಇಳಿಕೆ ಸಂಬಂಧ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡು ಪ್ರತಿಭಟನೆಯ ಎಚ್ಚರಿಕೆ ನೀಡಿದೆ.

 ಹಾಲು ಉತ್ಪಾದಕರಿಗೆ ದ್ರೋಹ ಬಗೆಯುವುದೇ ಕಾಂಗ್ರೆಸ್‌ ಸರ್ಕಾರದ ಏಕೈಕ ಅಜೆಂಡಾ!!

ಚುನಾವಣೆಗೂ ಮುನ್ನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ ₹7 ಸಬ್ಸಿಡಿ ನೀಡುತ್ತೆವೆಂದು ಬೋಗಸ್‌ ಗ್ಯಾರಂಟಿ ನೀಡಿತ್ತು.

ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಹಾಲು ಉತ್ಪಾದಕರಿಗೆ ನೀಡುವ ದರವನ್ನು ಗಣನೀಯವಾಗಿ ಕಡಿತಗೊಳಿಸುತ್ತಾ, ಈಗ ಮತ್ತೊಮ್ಮೆ ಪ್ರತಿ ಲೀಟರ್‌ ಮೇಲೆ ₹1.5 ಕಡಿತಗೊಳಿಸಿದೆ.

ಸಿಎಂ ಸಿದ್ದರಾಮಯ್ಯ ಅವರೆ, ಕೂಡಲೇ ಹಾಲು ಉತ್ಪಾದಕರಿಗೆ ದರ ಹೆಚ್ಚಿಸದಿದ್ದಲ್ಲಿ ಹೋರಾಟ ಖಚಿತ-ನಿಶ್ಚಿತ-ಖಂಡಿತ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments