ಸ್ಯಾಂಟ್ರೊರವಿ ವ್ಯಕ್ತಿ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬಂದ್ರೆ ಸಾವನ್ನು ಬಯಸುತ್ತೇನೆ

Webdunia
ಸೋಮವಾರ, 16 ಜನವರಿ 2023 (15:06 IST)
ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸಮಾಜ ಧ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ, ಬದುಕಲು ಇಚ್ಛಿಸುವುದಿಲ್ಲ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಹೇಳಿದ್ದಾರೆ.
 
ಸಚಿವರು ನಿನ್ನೆ ರಾತ್ರಿ  ಬೆಂಗಳೂರಿನ, ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ, ವಾರ್ಷಿಕ ಕ್ರೀಡಾಕೂಟ ದ, ಸಮಾರೋಪ ಸಮಾರಂಭ ವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
 
 ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಸಚಿವರು, " ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು, ಪಾರದರ್ಶಕವಾಗಿವೆ" ಎಂದು ಹೇಳಿದ ಸಚಿವರು " ಒಂದು ವೇಳೆ ಸ್ಯಾನ್ ಟ್ರೋ ರವಿಯಂತಹ  ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ದಾರಿ ತುಳಿಯುತ್ತೇನೆ" ಎಂದು ಭಾವುಕರಾಗಿ, ಸಚಿವರು, ನುಡಿದರು.
 
ಗುಜರಾತ್ ಪ್ರವಾಸದ ಸಂದರ್ಭದಲ್ಲಿ, ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಕುರಿತು, ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ದ, ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ, ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ, ಶೀಘ್ರದಲ್ಲಿಯೇ, ವಿಶ್ವ ವಿದ್ಯಾಲಯದ ಶಂಕು ಸ್ಥಾಪನ ಕಾರ್ಯಕ್ರಮವೂ, ನಡೆಯಲಿದೆ, ಎಂದ ಸಚಿವರು, 
 
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೆಂಧ್ರ ಭಾಯಿ ಪಟೇಲ್ ಅವರನ್ನು ಸೌಜನ್ಯ ಭೇಟಿ ನಡೆಸಿದ್ದೇನೆ. ಎಲ್ಲವೂ ತೆರದ ಪುಸ್ತಕದಂತೆ ಇದೆ, ಎಂದರು.ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು, ಜವಾಬ್ದಾರಿಯುತವಾಗಿ ವರ್ತಿಸಬೇಕು, ಎಂದು ಸಚಿವರು,  ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments