Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ಡೀಲ್ ಕುದುರದಿದ್ದರೆ, ನೋ ಡ್ಯೂಟಿ, ಸಂಬಳ ಮಾತ್ರ ಗ್ಯಾರೆಂಟಿ

Sampriya
ಗುರುವಾರ, 8 ಆಗಸ್ಟ್ 2024 (17:40 IST)
ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎಗ್ಗಿಲ್ಲದೆ ನಡೆಯುತ್ತಿರುವ ವರ್ಗಾವಣೆ ದಂಧೆಯ ಮತ್ತೊಂದು ಕರಾಳ ಮುಖ ಬಯಲಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಆರ್‌ ಅಶೋಕ್ ಅವರು, ವರ್ಗಾವಣೆ ಡೀಲ್ ಕುದುರದಿದ್ದರೆ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡದೆ ಬಿಟ್ಟಿ ಸಂಬಳ ಕೊಟ್ಟು ಕೂರಿಸುವ ಪರಿಪಾಠ ಆರಂಭವಾಗಿದ್ದು, ನಗರಾಭಿವೃದ್ದಿ ಇಲಾಖೆಯ 25 ಅಧಿಕಾರಿಗಳಿಗೆ ಕಳೆದ 15 ತಿಂಗಳಿನಿಂದ ಯಾವುದೇ ಸ್ಥಳ ನಿಯುಕ್ತಿ ಮಾಡದೆ ರಾಜ್ಯದ ಬೊಕ್ಕಸಕ್ಕೆ 2.40 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದೆ ಈ ದರಿದ್ರ ಕಾಂಗ್ರೆಸ್ ಸರ್ಕಾರ.

ಸಿಎಂ ಸಿದ್ದರಾಮಯ್ಯನವರೇ, ಮೂಡಾ ಹಗರಣದ ಕಡತಗಳನ್ನ ಮೈಸೂರಿನಿಂದ ಬೆಂಗಳೂರಿಗೆ ತಂದು ಅವುಗಳನ್ನ ತಿದ್ದಿ, ತೀಡಿ, ತಿರುಚಿ ಸಾಕ್ಷಿ ನಾಶ ಮಾಡುವಲ್ಲಿ ಬ್ಯುಸಿ ಆಗಿರುವ ತಮ್ಮ ಆಪ್ತ ಸಚಿವ ಭೈರತಿ ಸುರೇಶ್ ಅವರಿಗೆ  ಅವರ ಇಲಾಖೆಯಲ್ಲಿ 25 ಅಧಿಕಾರಿಗಳಿಗೆ 15 ತಿಂಗಳಿನಿಂದ ಸ್ಥಳ ನಿಯುಕ್ತಿ ಆಗದಿರುವ ವಿಷಯವೇ ಗೊತ್ತಿಲ್ಲವಂತೆ. ಇನ್ನಾದರೂ ಅವರಿಗೆ ಮೂಡಾ ಹಗರಣದ ಕಡತ ತಿರುಚುವ ಕೆಲಸದಿಂದ ಮುಕ್ತಿ ನೀಡಿ ಇಲಾಖೆಯ ಕರ್ತವ್ಯದ ಬಗ್ಗೆ ಗಮನ ಹರಿಸಲು ಬಿಡಿ.

ಅಂದಹಾಗೆ ರಾಜ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ವರ್ಗಾವಣೆ ದಂಧೆಯಲ್ಲಿ ತಮ್ಮ ಪಾಲೆಷ್ಟು ಸಿಎಂ ಸಿದ್ದರಾಮಯ್ಯನವರೇ ಎಂದು ಪ್ರಶ್ನೆಇಸಿದ್ದಾರೆ.
 ನವರೇ?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments