ಮರ್ಯಾದೆ ಇದ್ರೆ ಗ್ಯಾರಂಟಿ ಜಾರಿ ಮಾಡ್ಬೇಕಿತ್ತು

Webdunia
ಬುಧವಾರ, 5 ಜುಲೈ 2023 (18:42 IST)
ಕಾಂಗ್ರೆಸ್​​ನವರು ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ. ಬಿಜೆಪಿ ಕಚೇರಿ‌ ಮುಂದೆ ಧರಣಿ ಮಾಡ್ತಾರಂತೆ, ಮಾನ ಮರ್ಯಾದೆ ಇದ್ರೆ ಐದು ಗ್ಯಾರಂಟಿ ಜಾರಿ ಮಾಡಬೇಕಿತ್ತು ಎಂದು ಶಾಸಕ ಆರ್. ಅಶೋಕ್​ ಸರ್ಕಾರದ ವಿರುದ್ಧ ಕಿಡಿಕಾರಿದ್ರು.. ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಲ್ಲದಕ್ಕೂ ಮೋದಿ‌ ಮೋದಿ ಅಂತಾರೆ. ಘೋಷಣೆ ಮಾಡುವಾಗ ನಾವು 10 ಕೆ.ಜಿ‌. ಕೊಡ್ತೀವಿ ಎಂದಿದ್ರು. ಆಗ ಜ್ಞಾನ ಇರಬೇಕಿತ್ತು ಎಂದು ತಿರುಗೇಟು ನೀಡಿದ್ರು.ಗ್ಯಾರಂಟಿ ಕಾರ್ಡ್​​​ನಲ್ಲಿ‌ ಕೇಂದ್ರ ಸರ್ಕಾರ ಕೊಡುತ್ತೆ ಅಂತಾ ಹಾಕಿದ್ರಾ? ಇದು ಆಡಂಬರದ ಸರ್ಕಾರ ಎಂದು ವ್ಯಂಗ್ಯವಾಡಿದ್ರು. ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವೆಲ್ಲಾ ಹೋಗಿ ಮಾತಾಡಿದ್ದೇವೆ. ನಮ್ಮ ಭಾವ‌ನೆಗಳನ್ನ ಹೇಳಿದ್ದೀವಿ. ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ಕೊಟ್ಟಿದ್ದಾರೆ.. ಸಂಜೆ ಒಳಗೆ ವಿಪಕ್ಷ ನಾಯಕ ಆಯ್ಕೆ ಆಗ್ತಾರೆ. ನಾನು ವಿಪಕ್ಷ ನಾಯಕ ಸ್ಥಾನ ಕೇಳಿಲ್ಲ. ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದೇನೆ ನೋಡೋಣ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments