Webdunia - Bharat's app for daily news and videos

Install App

ಕನ್ನಡ ಕಲಿಯದಿರುವುದು ಕನ್ನಡ ನಾಡಿಗೆ ಮಾಡುವ ಅವಮಾನ: ಸಿದ್ದರಾಮಯ್ಯ

Webdunia
ಬುಧವಾರ, 1 ನವೆಂಬರ್ 2017 (15:57 IST)
ಬೆಂಗಳೂರು: ಕೆಲ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ಶಿಕ್ಷೆ ವಿಧಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ, ಮಕ್ಕಳ ಮೇಳದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಖಾಸಗಿ ಇಂಗ್ಲಿಷ್ ಶಾಲೆಗಳು ಐಸಿಐಸಿ, ಸಿಬಿಎಸ್‍ಸಿ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇತ್ತೀಚೆಗೆ ಕೆಲ ಖಾಸಗಿ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸಲಾಗುತ್ತಿದೆ ಎನ್ನುವ ಮಾತು ಕೇಳಿಬರುತ್ತಿವೆ. ಕನ್ನಡ ವಿರೋಧಿ ನಿಲುವನ್ನು ಸರ್ಕಾರ ಸಹಿಸುವುದಿಲ್ಲ. ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಯಾವುದೇ ಭಾಷೆ ಕಲಿಯಿರಿ. ಆದರೆ ಕನ್ನಡವನ್ನೇ ಕಲಿಯದಿರುವುದು ಕನ್ನಡ ನಾಡಿಗೆ ಮಾಡುವ ಅವಮಾನ. ಮೊದಲು ಕನ್ನಡಿಗ ನಂತರ ಭಾರತೀಯ ಎಂಬ ಭಾವನೆ ಪ್ರತಿಯೊಬ್ಬ ಕನ್ನಡಿಗರಲ್ಲಿ ಮೂಡಬೇಕು. ನಮ್ಮ ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಇರಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments