Webdunia - Bharat's app for daily news and videos

Install App

ನೀರು ಹರಿಸಿದ್ರೆ ಹೋರಾಟದ ಎಚ್ಚರಿಕೆ

Webdunia
ಗುರುವಾರ, 14 ಸೆಪ್ಟಂಬರ್ 2023 (16:40 IST)
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಕರವೇ ಅಧ್ಯಕ್ಷ ನಾರಾಯಣಗೌಡ ಪ್ರತಿಕ್ರಿಯಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಂಸದರು ನರಸತ್ತವರು. ಸಂಸದರ ಮನೆಗೆ ಕರವೇ ಕಾರ್ಯಕರ್ತರನ್ನು ನುಗ್ಗಿಸುತ್ತೇವೆ ಎಂದರು. ಕಾವೇರಿ ನದಿ ನೀರು ವಿಚಾರದಲ್ಲಿ ನಾವು ಭುಗಿಲೇಳಬೇಕಿದೆ. ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂಬ ಆದೇಶವನ್ನು ನಾವು ಧಿಕ್ಕರಿಸುತ್ತೇವೆ. ನಮ್ಮಲ್ಲಿ ನೀರಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಧಿಮಾಕು ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಧಿಮಾಕು ಮಾಡಿಕೊಂಡು ನೀರು ಕೊಡಿ ಅಂತಾರೆ. ಹೀಗೆ ಹೇಳುತ್ತಿದ್ದರೆ ತಮಿಳುನಾಡಿಗೆ ನೀರು ಕೊಡಲು ಹೇಗೆ ಸಾಧ್ಯ? ರಾಜ್ಯ ಸರ್ಕಾರದ ನಿಲುವನ್ನು ಈವರೆಗೂ ಬೆಂಬಲಿಸಿದ್ದೇವೆ. ಆದರೆ ಇನ್ನು ಬೆಂಬಲಿಸುವುದಿಲ್ಲ. ಕಾವೇರಿ ‌ನೀರು ನಿಯಂತ್ರಣ ಸಮಿತಿ ಆದೇಶ ಪಾಲಿಸಿದ್ರೆ ಭುಗಿಲೇಳುತ್ತೇವೆ. ಲಾಠಿಚಾರ್ಜ್‌, ಫೈರಿಂಗ್‌ ಮಾಡಿ ಜೈಲಿಗೆ ಹಾಕಿದ್ರೂ ನಾವು ಹೆದರಲ್ಲ. ಕಾವೇರಿ ಕನ್ನಡಿಗರ ಜೀವನದಿ, ರಕ್ಷಣೆಗಾಗಿ ಏನು ಬೇಕಾದ್ರೂ ಮಾಡುತ್ತೇವೆ. ಬೆಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಇಂದು ಸಭೆ ಕರೆದಿದ್ದೇವೆ. ಶುಕ್ರವಾರ ಎಲ್ಲಾ ಡಿಸಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ. ಶನಿವಾರ ಜೈಲು ಭರೋ ಚಳವಳಿ ಮಾಡ್ತೇವೆ, ಎಲ್ಲಾ ಕಡೆ ಮುತ್ತಿಗೆ ಹಾಕುತ್ತೇವೆ. ರಾಜ್ಯ ಸರ್ಕಾರ ಎಷ್ಟು ಜನರನ್ನು ಜೈಲಿಗೆ ಹಾಕುತ್ತದೆಯೋ ಹಾಕಲಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments