Webdunia - Bharat's app for daily news and videos

Install App

ನಾವು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಅವರೇ ಕಾರಣ: ಪ್ರಿಯಾಂಕ್‌ ಖರ್ಗೆ ವಿರುದ್ಧ ಇದೇನು ಹೊಸ ಆರೋಪ

Sampriya
ಮಂಗಳವಾರ, 14 ಜನವರಿ 2025 (14:57 IST)
Photo Courtesy X
ಬೆಂಗಳೂರು: ನಮಗೆ ಬರಬೇಕಿದ್ದ ಬಾಕಿ ಬಿಲ್​ ಪಾವತಿ ಮಾಡದೆ ನಿತ್ಯ ಕಿರುಕುಳ ನೀಡಲಾಗುತ್ತಿದೆ. ಇದರಿಂದ ಕಿಯೋನಿಕ್ಸ್ ವೆಂಡರ್​ದಾರರ ಕುಟುಂಬ ಸರ್ವನಾಶವಾಗುತ್ತಿದೆ. ನಮಗೆ ದಯಾಮರಣ ನೀಡಿ ಎಂದು ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಷನ್ ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ.

ಕಿರುಕುಳದಿಂದ ಬೇಸತ್ತು ವೆಂಡರ್​ಗಳು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಶರತ್ ಬಚ್ಚೇಗೌಡ ಕಾರಣ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ನಿತ್ಯ ಕಿರುಕುಳ ನೀಡಿ, ಕಿಯೋನಿಕ್ಸ್​ ವಂಡೇರ್​ದಾರರ ಬದುಕು ಕಿತ್ತುಕೊಂಡಿದ್ದಾರೆ. 450 ರಿಂದ 500 ಜನ ವೆಂಡರ್​​ದಾರರ ಜೊತೆಗೆ ನಮ್ಮಲ್ಲಿ ಕೆಲಸ ಮಾಡುವ 6 ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸರ್ವಾನಾಶ ಮಾಡಿರುವ ಕಾರಣ ನಾವು ಬೇಸತ್ತಿದ್ದೇವೆ. ಹೀಗಾಗಿ, ನಮ್ಮೆಲ್ಲರಿಗೂ ಒಂದೇ ಬಾರಿಗೆ ಸಾಯಲು ದಯಾಮರಣ ನೀಡಿ ಎಂದು ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಷನ್ ಅಧ್ಯಕ್ಷ ವಸಂತ ಬಗೇರ ಹಾಗೂ ಸದಸ್ಯರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಸುಮಾರು 48 ವರ್ಷಗಳಿಂದ ಕಿಯೋನಿಕ್ಸ್​ ಕಾರ್ಯನಿರ್ವಹಿಸುತ್ತಿದೆ. 450 ರಿಂದ 500ಕ್ಕೂ ಹೆಚ್ಚು ಸಣ್ಣ ಉದ್ಯಮಿದಾರರನ್ನು ನಿಗಮದಲ್ಲಿ ವೆಂಡರ್​​ದಾರರನ್ನಾಗಿ ನೋಂದಾಯಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ದಶಕಗಳ ಕಾಲದಿಂದಲೂ, ಕಿಯೋನಿಕ್ಸ್​ ಸಂಸ್ಥೆಯು ವಂಡರ್​ದಾರರ ಜೊತೆ ಉತ್ತಮ ಬಾಂಧವ್ಯವನ್ನು ಇರಿಸಿಕೊಂಡಿದೆ. ಆದರೆ ದಿಢೀರನೆ 2023ರಲ್ಲಿ ಸರ್ಕಾರ ಬದಲಾದ ತಕ್ಷಣ ವಂಡೆರ್​ದಾರರ ಬಿಲ್ಲನ್ನು ತಡೆ ಹಿಡಿದು ನಾನಾ ರೀತಿಯಾಗಿ ಕಿರುಕುಳ ಕೊಡಲು ಪ್ರಾರಂಭಿಸಲಾಗಿದೆ.

3 ರಿಂದ 4 ತಿಂಗಳುಗಳ ಕಾಲ ಅಧಿಕಾರಗಳು ಹಾಗೂ ಸಚಿವರಲ್ಲಿ ನಾವು ಸಂಯಮದಿಂದ ಎಷ್ಟೇ ಕೇಳಿಕೊಂಡರು. ಮನವಿ ಮಾಡಿಕೊಂಡರೂ ಬಿಲ್ ಪಾವತಿ ಮಾಡಿಲ್ಲ. ಈ ಹಿಂದೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆಲಸ ಮಾಡುತಿದ್ದ ಸಂಗಪ್ಪರವರು ಕಮಿಷನ್ ರೂಪದಲ್ಲಿ ಶೇ 12 ರಷ್ಟು ಲಂಚ ಕೇಳಿ ಕಿರುಕುಳ ಕೊಟ್ಟು, ನಾವು ಲಂಚ ಕೊಡಲು ಒಪ್ಪದೇ ಇದ್ದಾಗ ನಮ್ಮ ಬಿಲ್ ಪಾವತಿ ಮಾಡದೆ ತಡೆಹಿಡಿದಿದ್ದರು. ನಾವುಗಳು ನಮ್ಮ ಅಸೋಸಿಯೇಷನ್ ಕಡೆಯಿಂದ ಅಸೋಸಿಯೇಷನ್‌ ಅಧ್ಯಕ್ಷ ವಸಂತ ಕ ಬಂಗೇರ ಹತ್ತಿರ ಎಲ್ಲರೂ ಚರ್ಚಿಸಿ ಆ ಭ್ರಷ್ಟ ಅಧಿಕಾರಿಯ ವಿರುದ್ಧ ಪ್ರತಿಭಟನೆ ಮಾಡಿದೆವು. ಆದರೂ ಯಾವುದೇ ಪರಿಹಾರ ಸಿಕ್ಕಿರುವುದಿಲ್ಲಎಂದು ದೂರಿದ್ದಾರೆ.

ನಾವು ಪ್ರತಿಭಟನೆ ಮಾಡಿದ್ದರಿಂದ ಪ್ರಿಯಾಂಕ್ ಖರ್ಗೆ ಕೋಪಗೊಂಡು ಮತ್ತು ಅಧಿಕಾರಿಗಳು ಸೇರಿ ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ವೈಯಕ್ತಿಕ ದ್ವೇಷ ಸಾಧಿಸಲು ಆರಂಭಿಸಿದ್ದಾರೆ. ಒಂದೂವರೆ ವರ್ಷ ಕಳೆದರೂ ತನಿಖೆಯ ಹೆಸರಲ್ಲಿ ನಮ್ಮ ಹಣ ಬಾಕಿ ಉಳಿಸಿಕೊಂಡು, ಪ್ರತಿದಿನ ಒಂದಲ್ಲಾ ಒಂದು ಕಾರಣ ಹೇಳುತ್ತಾ ನಾಳೆ, ನಾಡಿದ್ದು ನಿಮ್ಮ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳುತ್ತಾ ಒಂದೂವರೆ ವರ್ಷ ಕಳೆದರು ನಮ್ಮ ಬಿಲ್ ಪಾವತಿ ಮಾಡದೆ. ನಮ್ಮ ಬದುಕನ್ನೇ ಸರ್ವನಾಶ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕೆಲಸವೂ ಇಲ್ಲದೆ, ನಾವು ಸಾಲ ಮಾಡಿ ಕೆಲಸಕ್ಕೆ ಹಾಕಿರುವ ನಮ್ಮ ಹಣ ನಮಗೆ ಕೊಡದೆ ನಮ್ಮೆಲ್ಲರ ಬದುಕನ್ನೇ ಕಿತ್ತುಕೊಂಡು ನಾವೆಲ್ಲರೂ ನರಕ ಅನುಭವಿಸುವಹಾಗೆ ನರಕ ತೋರಿಸುತ್ತಿದ್ದಾರೆ. ಇವರ ಹಿಂಸೆಯಿಂದ ನಮ್ಮ ವಂಡರ್​ಗಳು​​ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಮಾತಾಡುತ್ತಿದ್ದಾರೆ. ನಮ್ಮೆಲ್ಲರ ಪಾಲಿಗೆ ಉಳಿದಿರುವುದು ಇನ್ನು ಸಾಯುವ ಮಾರ್ಗ ಒಂದೇ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments