Select Your Language

Notifications

webdunia
webdunia
webdunia
webdunia

ವಿ.ಸೋಮಣ್ಣ ಕಾಂಗ್ರೆಸ್ ಸೇರಿದರೆ ಸ್ವಾಗತ: ತನ್ವೀರ್ ಸೇಠ್

ವಿ.ಸೋಮಣ್ಣ ಕಾಂಗ್ರೆಸ್ ಸೇರಿದರೆ ಸ್ವಾಗತ: ತನ್ವೀರ್ ಸೇಠ್
ಹುಬ್ಬಳ್ಳಿ , ಶನಿವಾರ, 21 ಜನವರಿ 2017 (13:38 IST)
ಬಿಜೆಪಿ ಪಕ್ಷದ ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಪಕ್ಷ ಸೇರಿದರೆ ಸ್ವಾಗತಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
 
ಹುಬ್ಬಳ್ಳಿ ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಸಾರ್ವಜನಿಕರ ಭೇಟಿ ಹಾಗೂ ಶಿಕ್ಷಕರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯಕಾರಣದಲ್ಲಿ ಯಾವುದು ಅಸಾಧ್ಯವಲ್ಲ. ಬಿಜೆಪಿ ಮಾಜಿ ಸಚಿವ ವಿ. ಸೋಮಣ್ಣ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವುದಾದರೆ ಸ್ವಾಗತ ಎಂದರು. 
 
ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸಹಜ. ಆದರೆ, ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸುವುದು ಸರಿಯಲ್ಲ ಎಂದು ಕಿಡಿಕಾರಿದರು. 
 
2017-18 ಸಾಲಿನಲ್ಲಿ ಹೊಸ ಪಠ್ಯ ಕ್ರಮ ಜಾರಿ ಮಾಡಲಾಗುತ್ತದೆ. ಅದರಲ್ಲಿ ಯಾವುದೇ ಕೇಸರಿಕರಣ ಹಾಗೂ ಅಹಿಂದಕರಣ ಮಾಡುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ತನ್ವೀರ್ ಸ್ಪಷ್ಟಪಡಿಸಿದರು. 
 
ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ಆದರೆ, ಈ ಸುದ್ದಿಗಳು ಸುಳ್ಳು ಎನ್ನಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ.ಸೋಮಣ್ಣ ಅವರು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಗನಿಗಾಗಿ ತಮ್ಮನನ್ನು ಬಲಿ ನೀಡಿದ ಮುಲಾಯಂ