Webdunia - Bharat's app for daily news and videos

Install App

ಯೋಗೇಶ್ವರ್‌ಗೆ ಮಾನ ಮರ್ಯಾದೆ ಇದ್ದರೆ ಭಗೀರಥನೆಂದು ಹೇಳಿಕೊಳ್ಳದೆ ಚುನಾವಣೆ ಎದುರಿಸಲಿ: ಡಿವಿಎಸ್‌

Sampriya
ಶುಕ್ರವಾರ, 25 ಅಕ್ಟೋಬರ್ 2024 (14:21 IST)
Photo Courtesy X
ರಾಮನಗರ: ಚನ್ನಪಟ್ಟಣದ ಕೆರೆಗಳಿಗೆ ನೀರು ತುಂಬಿಸಲು ಏತ ನೀರಾವರಿ ಮೂಲಕ  ₹150 ಕೋಟಿ ಅನುದಾನವನ್ನು ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಡುಗಡೆ ಮಾಡಿದೆ. ಅದರ ಫಲವಾಗಿ ಇಲ್ಲಿನ ಕೆರೆಗಳು ತುಂಬಿವೆ. ಅದಕ್ಕೆ ಕಾರಣವಾದ ನಾನು ಭಗೀರಥನೇ ಹೊರತು ಯೋಗೇಶ್ವರ್ ಅಲ್ಲವೇ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.

ಚನ್ನಪಟ್ಟಣದ ಕೆರೆಗಳಿಗೆ ನೀರು ತುಂಬಿಸಿದ ಕ್ರೆಡಿಟ್‌ ನನಗೆ ಸೇರಬೇಕು. ಯೋಗೇಶ್ವರ್ ಅದರ ಕ್ರೆಡಿಟ್ ತೆಗೆದುಕೊಂಡು ಭಗೀರಥ ಎಂದು ಹೇಳಿಕೊಂಡು ಚುನಾವಣೆ ಮಾಡುತ್ತಾ ಬಂದಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದರೆ ಹಾಗೆ ಹೇಳಿಕೊಳ್ಳದೆ ಚುನಾವಣೆ ಎದುರಿಸಲಿ ಎಂದು ಅವರು ಸವಾಲು ಹಾಕಿದರು.

ಆರನೇ ಸಲ ಪಕ್ಷಾಂತರ ಮಾಡಿ ಈಗ ಕಾಂಗ್ರೆಸ್ ಸೇರಿರುವ ಯೋಗೇಶ್ವರ್ ನಡೆ, ರಾಜಕೀಯ ಪಕ್ಷಗಳು ಒಬ್ಬ ವ್ಯಕ್ತಿಯನ್ನು ಎಷ್ಟರಮಟ್ಟಿಗೆ ಇಡಬೇಕು ಎಂಬುದು ದೊಡ್ಡ ಪಾಠ. ನಾವು ಈ ಭಾಗದಲ್ಲಿ ಅವರ ಮೇಲೆ ಅವಲಂಬಿನೆ ಆಗಿದ್ದು ನಿಜ. ಈಗ ಅವರು ಮಾಡಿರುವ ದ್ರೋಹಕ್ಕೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದರು.

ಈ ಉಪ ಚುನಾವಣೆ ನಮಗೆ ದೊಡ್ಡ ಸವಾಲು. ಇಲ್ಲಿ ವ್ಯಕ್ತಿಯೇ ಪಕ್ಷ ಎಂದು ಬಿಂಬಿಸಿಕೊಂಡು ಪ್ರತಿ ಸಲ ಸ್ಚಾರ್ಥಕ್ಕಾಗಿ ಪಕ್ಷಾಂತರ ಮಾಡಿದ ಯೋಗೇಶ್ವರ್ ರಾಜಕಾರಣದಲ್ಲಿ ಇರಬೇಕೊ ಬೇಡವೊ ಎಂದು ನಿರ್ಧರಿಸುವ ಚುನಾವಣೆ ಇದಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments