Webdunia - Bharat's app for daily news and videos

Install App

ಸಾಲ ಕಂತು ಕಟ್ಟು ಇಲ್ಲಾಂದ್ರೆ ಸತ್ತೋಗು.. ಎಲ್ಲಾ ಮನ್ನಾ ಆಗುತ್ತೆ...!

Webdunia
ಭಾನುವಾರ, 20 ನವೆಂಬರ್ 2022 (14:02 IST)
ಸಾಲ ವಸೂಲಿಗಾಗಿ ಖಾಸಗಿ ಬ್ಯಾಂಕ್ ಸಿಬ್ಬಂದಿ ರೈತರಿಗೆ ಧಮಕಿ ಹಾಕುತ್ತಿರುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಈವತ್ತೂ ಸಹ ಇದೇ ರೀತಿ ಧಮಕಿ ಹಾಕಿದ ಪ್ರಕರಣ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕು ಕೊಳಘಟ್ಟ ಗ್ರಾಮದ ಮಹಿಳೆಯ ಬಳಿ ಸಾಲ ವಸೂಲಿ ಮಾಡಲು ಬಂದ ಖಾಸಗಿ ಬ್ಯಾಂಕ್ ಸಿಬ್ಬಂದಿಯೊಬ್ಬ ರಸ್ತೆ ಮಧ್ಯದಲ್ಲಿ ನಿಲ್ಲಿಸಿಕೊಂಡು ತೀವ್ರ ಒತ್ತಡ ಹೇರಿರುವ ವಿಡಿಯೋ ಲಭ್ಯವಾಗಿದೆ.ಸಾಲ ಹಿಂತಿರುಗಿಸಲು ಗಡುವು ಕೇಳಿದ ಮಹಿಳೆ ವಿರುದ್ದ ಹರಿಹಾಯ್ದಿದ್ದಾನೆ.ನೀನು ಸತ್ತೋದ್ರೆ ಸಾಲ ಮನ್ನಾ ಆಗುತ್ತೆ ಸಾಯಿ ಎಂದು ಧಮ್ಕಿ ಹಾಕಿ ಸಾಲ ವಸೂಲಿಗೆ ನಿಂತಿದ್ದಾನೆ. ಕೇವಲ 500 ರೂ. ಕಂತಿಗಾಗಿ ಮಹಿಳೆಗೆ ಸಾಯುವಂತೆ ಧಮ್ಕಿ  ಹಾಕಿದ್ದಾನೆ.ಒಂದು ವಾರದ ಗಡುವು ಕೇಳಿದ್ರೂ ಪಟ್ಟು ಬಿಡದೆ ಸಾಲ ವಸೂಲಿಗೆ ಒತ್ತಡ ಹೇರಿದ್ದಾನೆ.
 
ಹುಣಸೂರಿನ IDFC ಬ್ಯಾಂಕ್ ಸಿಬ್ಬಂದಿ ಸುರೇಶ್ ಹೀಗೆ ದುರ್ವರ್ತನೆ ತೋರಿರುವ ವ್ಯಕ್ತಿ.ವಾರದ ಕಂತಿನಲ್ಲಿ ಲತಾ ಎಂಬ ರೈತ ಮಹಿಳೆ IDFC ಬ್ಯಾಂಕ್ ನಲ್ಲಿ 50 ಸಾವಿರ ಸಾಲ ಪಡೆದಿದ್ದಾರೆ. .ವಾರಕ್ಕೆ 500 ರೂ ನಂತೆ ಕಂತು ಪಾವತಿಸುವ ಸಾಲ ಪಡೆದ ಮಹಿಳೆ ಕೆಲವು ಕಂತುಗಳನ್ನ ಕಟ್ಟಿಲ್ಲ. ಇದಕ್ಕಾಗಿ ನಡು ರಸ್ತೆಯಲ್ಲಿ ಮಹಿಳೆಯನ್ನ ಅಡ್ಡಗಟ್ಟಿ ಸಾಲ ವಸೂಲಿಗೆ ನಿಂತಿದ್ದಾನೆ. ದಾರಿಯಲ್ಲಿ ಹಣ ಬಿಸಾಕು ತಗೊಂಡು ಹೋಗ್ತೀನಿ ಅಂತ ದಬ್ಬಾಳಿಕೆಯಿಂದ ವರ್ತಿಸಿದ್ದಾನೆ. ಸ್ಥಳೀಯರೊಬ್ಬರು ಮಾನವೀಯತೆ ದೃಷ್ಟಿಯಿಂದ ಪ್ರಶ್ನಿಸಿದರೂ ಉಡಾಫೆಯಿಂದ ಉತ್ತರಿಸಿದ ಸಿಬ್ಬಂದಿ ಸಾಲದ ಕಂತಿಗಾಗಿ ಪಟ್ಟು ಹಿಡಿದಿದ್ದಾನೆ.
 
ಸಾಲ ವಸೂಲಿ ಹೆಸರಿನಲ್ಲಿ ರೈತರಿಗೆ ಕಿರುಕುಳ ನೀಡಬಾರದೆಂದು ಸರ್ಕಾರ ಸೂಚನೆ ನೀಡಿದೆ.ಹೀಗಿದ್ದರೂ ಖಾಸಗಿ ಬ್ಯಾಂಕ್ ಸಿಬ್ಬಂದಿ ದರ್ಪದಿಂದಲೇ ಸಾಲ ವಸೂಲಿಗೆ ನಿಂತಿರುವುದು ಶೋಚನೀಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments