ಈರುಳ್ಳಿ, ಬೆಳ್ಳುಳ್ಳಿ ಆಯ್ತು, ಟೊಮೆಟೊ ದರ ನೋಡಿದ್ರೆ ಟಾಟಾ ಹೇಳಬೇಕಷ್ಟೇ

Sampriya
ಶನಿವಾರ, 5 ಅಕ್ಟೋಬರ್ 2024 (15:56 IST)
Photo Courtesy X
ಬೆಂಗಳೂರು: ನವರಾತ್ರಿ ಹಬ್ಬ ಆರಂಭಗೊಳ್ಳುತ್ತಿದ್ದ ಹಾಗೇ ಜನಸಾಮಾನ್ಯರಿಗೆ ದಿನನಿತ್ಯ ಬಳಸುವ ತರಾಕರಿಗಳ ಬೆಲೆ ಮತ್ತುಷ್ಟು ಏರಿಕೆಯಾಗುತ್ತಿದೆ. ಈರುಳ್ಳಿ, ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಗ್ರಾಹಕರಿಗೆ ಟೊಮೆಟೊ ದರ ಏರಿಕೆಗೆ ಜನ ಸುಸ್ತಾಗಿದ್ದಾರೆ.

ಅಕಾಲಿಕ ಮಳೆಯಿಂದಾಗಿ ಟೊಮೆಟೊ ಇಳುವರಿ ಕುಸಿತಗೊಂಡಿರುವುದೇ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಇನ್ನು ನವರಾತ್ರಿ ಶುರುವಾದ ಹಿನ್ನೆಲೆ ಬೇಡಿಕೆ ಜಾಸ್ತಿಯಾಗಿದ್ದು, ಪೊರೈಕೆ ಕಡಿಮೆಯಿರುವ ಕಾರಣ ಟೊಮೆಟೋ ಬೆಲೆ ದಿಢೀರ್ ಜಾಸ್ತಿಯಾಗಿದೆ. ಕೆಜಿ 40ರೂಪಾಯಿ ಇದ್ದ ಟೊಮೆಟೋ ದರ ಇದೀಗ ಏಕಾಏಕಿ 80ರೂಪಾಯಿಗೆ ಏರಿಕೆಯಾಗಿದೆ.  ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

ಈಗಾಗಲೇ ಅಕಾಲಿಕ ಮಳೆಯಿಂದಾಗಿ 1 ಕೆಜಿ ಈರುಳ್ಳಿ ದರ 70 ರೂ. ದಾಟಿದೆ. 1 ಕೆಜಿ ಬೆಳ್ಳುಳ್ಳಿ ದರ 500 ರೂ. ಆಗಿದೆ. ಈಗ ಟೊಮೆಟೊ ದರ ಏರಿಕೆಯಿಂದಾಗಿ ದಸರಾ ಹಬ್ಬದ ಸಂದರ್ಭದಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

ಟೊಮೊಟೊ ಜತೆಗೆ ಇನ್ನಿತರ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ. ವಿವಿಧ ತರಕಾರಿಗಳ ಬೆಲೆ ಕೇಳಿದ ಜನರು ಬೆಚ್ಚಿ ಬೀಳುವುದರ ಜತೆಗೆ ಕೊಂಡುಕೊಳ್ಳಲು ಹಿಂದೆಮುಂದೆ ನೋಡುತ್ತಿದ್ದಾರೆ. ಸೊಪ್ಪಿನ ಬೆಲೆಯೂ ದುಬಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments