ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ: ಡಿಕೆಶಿಗೆ ಪರೋಕ್ಷವಾಗಿ ಕುಮಾರಸ್ವಾಮಿ ಕೌಂಟರ್‌

Sampriya
ಗುರುವಾರ, 20 ಮಾರ್ಚ್ 2025 (20:11 IST)
ಬೆಂಗಳೂರು:  ಭೂ ಒತ್ತುವರಿ ಪ್ರಕರಣದಲ್ಲಿ ಯಾವುದೇ ಸೇಡಿನ ರಾಜಕೀಯ ಇಲ್ಲ. ಸರ್ಕಾರಿ ಅಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಪಾಲಿಸಿದ್ದಾರೆ ಎಂದು ಡಿಕೆ ಶಿವಕುಮಾರ್‌ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್‌ ಡಿ ಕುಮಾರಸ್ವಾಮಿ ಕೌಂಟರ್‌ ನೀಡಿದ್ದಾರೆ.

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಪೋಸ್ಟ್‌ನಲ್ಲಿ ಬರೆದು  ಡಿಕೆಶಿಗೆ ಪರೋಕ್ಷವಾಗಿ ಕೌಂಟರ್ ನೀಡಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ ಪೋಸ್ಟ್‌ನಲ್ಲಿ ಹೀಗಿದೆ:

ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ!


ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್'ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ.

ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments