Webdunia - Bharat's app for daily news and videos

Install App

ನಿಮ್ಮ ಸಾಲ ಮನ್ನಾ ಆಗಬೇಕೆಂದರೆ ಹೀಗೆ ಮಾಡಿ

Webdunia
ಶುಕ್ರವಾರ, 6 ಸೆಪ್ಟಂಬರ್ 2019 (18:10 IST)
ಖಾಸಗಿ ಲೇವಾದೇವಿ ಇಲ್ಲವೇ ಗಿರವಿದಾರರಿಂದ ನೀವು ಪಡೆದ ಸಾಲದ ಋಣದಿಂದ ಮುಕ್ತರಾಗಬೇಕಾದರೆ ಇಲ್ಲಿಗೆ ಬನ್ನಿ.

ಖಾಸಗಿ ಲೇವಾದೇವಿ, ಗಿರವಿದಾರರಿಂದ ಪಡೆದ ಸಾಲದ ಋಣದಿಂದ ಮುಕ್ತಗೊಳಿಸುವ ಸಲುವಾಗಿ ಹಾಗೂ ರಾಜ್ಯದಲ್ಲಿನ ಸಣ್ಣ ರೈತರು, ಕೃಷಿ ಕಾರ್ಮಿಕರು ಹಾಗೂ ದುರ್ಬಲ ವರ್ಗಗಳ ಜನರಿಗೆ ಸಾಲದ ಋಣ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಕರ್ನಾಟಕ ಋಣ ಪರಿಹಾರ ವಿಧೇಯಕ-2018 ಕಾಯ್ದೆ ಜಾರಿಗೆ ತಂದಿದೆ.

ಕಲಬುರಗಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಖಾಸಗಿ ಲೇವಾದೇವಿ,  ಗಿರವಿದಾರರಿಂದ ಸಾಲ ಪಡೆದ ಸಾರ್ವಜನಿಕರು ಕಾಯ್ದೆಯಡಿ ಋಣಮುಕ್ತ ಪ್ರಯೋಜನ ಪಡೆದುಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

 ಕರ್ನಾಟಕ ಋಣ ಪರಿಹಾರ ವಿಧೇಯಕ-2018 ಕಾಯ್ದೆಯು 2019ರ ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಆದೇಶ ಹೊರಡಿಸಿದ ದಿನದಿಂದ 1 ವರ್ಷದವರೆಗೆ ಮಾತ್ರ ಈ ಕಾಯ್ದೆ ಜಾರಿಯಲ್ಲಿರುತ್ತದೆ.  

ಹೀಗಾಗಿ ಕಾಯ್ದೆ ಜಾರಿಯಾದ ದಿನದಿಂದ 90 ದಿನದೊಳಗಾಗಿ ಆಯಾ ಪ್ರದೇಶದಲ್ಲಿ ವಾಸಿಸುವ ಭೂರಹಿತ ಕೃಷಿ ಕಾರ್ಮಿಕ, ದುರ್ಬಲ ವರ್ಗಕ್ಕೆ ಸೇರಿದ ಅಥವಾ ಸಣ್ಣ ರೈತರು ಋಣ ಪರಿಹಾರಕ್ಕಾಗಿ ಕಲಬುರಗಿ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಕಲಬುರಗಿ ಸಹಕಾರ ಸಂಘಗಳ ಉಪನಿಬಂಧಕರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments