Webdunia - Bharat's app for daily news and videos

Install App

ನಿಮ್ಮ ಸಾಲ ಮನ್ನಾ ಆಗಬೇಕೆಂದರೆ ಹೀಗೆ ಮಾಡಿ

Webdunia
ಶುಕ್ರವಾರ, 6 ಸೆಪ್ಟಂಬರ್ 2019 (18:10 IST)
ಖಾಸಗಿ ಲೇವಾದೇವಿ ಇಲ್ಲವೇ ಗಿರವಿದಾರರಿಂದ ನೀವು ಪಡೆದ ಸಾಲದ ಋಣದಿಂದ ಮುಕ್ತರಾಗಬೇಕಾದರೆ ಇಲ್ಲಿಗೆ ಬನ್ನಿ.

ಖಾಸಗಿ ಲೇವಾದೇವಿ, ಗಿರವಿದಾರರಿಂದ ಪಡೆದ ಸಾಲದ ಋಣದಿಂದ ಮುಕ್ತಗೊಳಿಸುವ ಸಲುವಾಗಿ ಹಾಗೂ ರಾಜ್ಯದಲ್ಲಿನ ಸಣ್ಣ ರೈತರು, ಕೃಷಿ ಕಾರ್ಮಿಕರು ಹಾಗೂ ದುರ್ಬಲ ವರ್ಗಗಳ ಜನರಿಗೆ ಸಾಲದ ಋಣ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಕರ್ನಾಟಕ ಋಣ ಪರಿಹಾರ ವಿಧೇಯಕ-2018 ಕಾಯ್ದೆ ಜಾರಿಗೆ ತಂದಿದೆ.

ಕಲಬುರಗಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಖಾಸಗಿ ಲೇವಾದೇವಿ,  ಗಿರವಿದಾರರಿಂದ ಸಾಲ ಪಡೆದ ಸಾರ್ವಜನಿಕರು ಕಾಯ್ದೆಯಡಿ ಋಣಮುಕ್ತ ಪ್ರಯೋಜನ ಪಡೆದುಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

 ಕರ್ನಾಟಕ ಋಣ ಪರಿಹಾರ ವಿಧೇಯಕ-2018 ಕಾಯ್ದೆಯು 2019ರ ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಆದೇಶ ಹೊರಡಿಸಿದ ದಿನದಿಂದ 1 ವರ್ಷದವರೆಗೆ ಮಾತ್ರ ಈ ಕಾಯ್ದೆ ಜಾರಿಯಲ್ಲಿರುತ್ತದೆ.  

ಹೀಗಾಗಿ ಕಾಯ್ದೆ ಜಾರಿಯಾದ ದಿನದಿಂದ 90 ದಿನದೊಳಗಾಗಿ ಆಯಾ ಪ್ರದೇಶದಲ್ಲಿ ವಾಸಿಸುವ ಭೂರಹಿತ ಕೃಷಿ ಕಾರ್ಮಿಕ, ದುರ್ಬಲ ವರ್ಗಕ್ಕೆ ಸೇರಿದ ಅಥವಾ ಸಣ್ಣ ರೈತರು ಋಣ ಪರಿಹಾರಕ್ಕಾಗಿ ಕಲಬುರಗಿ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಕಲಬುರಗಿ ಸಹಕಾರ ಸಂಘಗಳ ಉಪನಿಬಂಧಕರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments