ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

Sampriya
ಗುರುವಾರ, 4 ಡಿಸೆಂಬರ್ 2025 (17:50 IST)
ಬೆಂಗಳೂರು: ವಾಚ್ ವಿಚಾರದಲ್ಲಿ ಕೇಳಿದಾಗ ಸುಳ್ಯಾಕೆ ಹೇಳುತ್ತೀರಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಒಂದೇ ಕಂಪೆನಿಯ ವಾಚ್ ಧರಿಸಿದ್ದಾರೆ. ಇದೊಂದು ಕಾಂಗ್ರೆಸ್ ಕಂಪೆನಿ ಇದ್ದಂತೆ ಎಂದು ಟೀಕಿಸಿದರು. 

ಚುನಾವಣಾ ಅಫಿಡವಿಟ್‍ನಲ್ಲಿ ಡಿ.ಕೆ.ಶಿವಕುಮಾರ್ ಅವರು ಒಂದು ರೋಲೆಕ್ಸ್ ವಾಚ್ 9 ಲಕ್ಷ ಎಂದು ತಿಳಿಸಿದ್ದಾರೆ. ಹೂಬ್ಲೋಟ್ ವಾಚ್ 23,90,246 ರೂ. ಎಂದಿದ್ದಾರೆ. ಅವರಿಬ್ಬರ ಕೈಯಲ್ಲಿ ಕಾರ್ಟಿಯರ್ ಕಂಪೆನಿಯ ವಾಚ್ ಇದೆ. ಎಲ್ಲಿ ಅದನ್ನು ತಿಳಿಸಿದ್ದಾರೆ? ಇವತ್ತಿನ ದರ 43 ಲಕ್ಷ ಇದ್ದು, ತೆರಿಗೆ ಸೇರಿ 46-47 ಲಕ್ಷ ಆಗುತ್ತದೆ ಎಂದರು.

ಇದು ಕದ್ದ ಮಾಲೇ? ಕೊಂಡ ಮಾಲೇ? ಒಂದುವೇಳೆ ನೀವು ರಾಜ್ಯಕ್ಕೆ ಸುಳ್ಳು ಹೇಳಿದ್ದರೆ? ಕಾರ್ಡಿನಿಂದ ಪಾವತಿ ಆಗಿದ್ದರೆ ದಾಖಲೆ ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು. 

ಸಿದ್ದರಾಮಯ್ಯನವರು ವಾಚ್‍ಗಳ ಪ್ರಿಯರು; ಅವರ ವಾಚ್‍ಗಳು ಕೋಟ್ಯಂತರ ರೂ. ಮೌಲ್ಯದ್ದು; ಅವರ ಶೂ ಕೂಡ ಲಕ್ಷಾಂತರ ರೂ. ಬೆಲೆಯದು ಎಂದು ವಿವರಿಸಿದರು.

ಒಂದೂವರೆ ವರ್ಷ ಹಿಂದೆ ನಾನು ವಾಚ್‍ಗಳ ಬಗ್ಗೆ ಹೇಳಿದ್ದೆ. ಆಗ 8 ವಾಚ್ ಇತ್ತು. ಈಗ 18- 19 ವಾಚ್ ಇದೆ ಎಂದು ಮಾಹಿತಿ ಲಭಿಸಿದೆ ಎಂದರು. ಎಲ್ಲಿ ಇವುಗಳ ಲೆಕ್ಕ ಕೊಟ್ಟಿದ್ದೀರಿ ಎಂದು ಕೇಳಿದರು. ಈಗ ಇದಕ್ಕೆ ಲೆಕ್ಕ ಕೊಡಿ ಎಂದು ಒತ್ತಾಯಿಸಿದರು.

ನಿಮ್ಮ ಸಮಯ ಸರಿ ಇದ್ದರೆ...
ವಾಚೇನೋ ಸರಿ ಇರಬಹುದು; ಅದರಲ್ಲಿ ತೋರಿಸುವ ಸಮಯ ಸರಿ ಇಲ್ಲ; ನಿಮ್ಮ ಸಮಯ ಸರಿ ಇದ್ದರೆ ಇವೆಲ್ಲ ಬರುತ್ತಿರಲಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಗಿ ತಿಳಿಸಿದರು.

ಒಂದೇ ಕಂಪೆನಿ ವಾಚ್ ಕಟ್ಟಿದ್ದರೂ ಒಬ್ಬರು ಬಿಟ್ಟು ಕೊಡಬೇಕು; ಇನ್ನೊಬ್ಬರು ಹಿಡಿದುಕೊಂಡು ಕೂತ್ಕೋಬೇಕಿದೆ ಎಂದರು. ಶೇ 63 ಭ್ರಷ್ಟಾಚಾರದ ಸಂಬಂಧ ತನಿಖೆ ನಡೆಸಿ ಎಂದು ಆಗ್ರಹವನ್ನು ಮುಂದಿಟ್ಟರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯ ವಕ್ತಾರ ಪ್ರಕಾಶ್ ಅವರು ಹಾಜರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಯುಪಿ ಯೋಗಿ ಆದಿತ್ಯನಾಥ್‌ಗೆ ಪ್ರಾಣಿಗಳೆಂದರೆ ಎಷ್ಟು ಪ್ರೀತಿ, ಈ ಫೋಟೋನೇ ಸಾಕ್ಷಿ

ಮುಂದಿನ ಸುದ್ದಿ
Show comments