Webdunia - Bharat's app for daily news and videos

Install App

ಯಡಿಯೂರಪ್ಪರನ್ನ ಕಡೆಗಣಿಸಿದ್ದೇ ಬಿಜೆಪಿಗೆ ಶಾಪ : ರೇಣುಕಾಚಾರ್ಯ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (09:45 IST)
ಬೆಂಗಳೂರು : ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿದೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಗಳಿಗೆ ಗೈರಾಗುವ ವಿಚಾರಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ನಾನು ಹೋಗಿಲ್ಲ. ಆ ನೋಟಿಸ್ ವಾಪಸ್ ಪಡೆಯಬೇಕು ಅದಕ್ಕೆ ಸಭೆಗೆ ಹಾಜರಾಗ್ತಿಲ್ಲ.

ನಾನು ಏನು ಹೇಳಬೇಕೊ ಅದನ್ನ ಹೇಳಿದ್ದೀನಿ. ಇದರಿಂದ ನನಗೆ ವೈಯಕ್ತಿಕವಾಗಿ ಯಾವುದೇ ಲಾಭ ಇಲ್ಲಾ ನಷ್ಟನೂ ಇಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತರ ಅಪೇಕ್ಷೆಯಂತೆ ಇರುವುದನ್ನ ನೇರವಾಗಿ ಹೇಳಿದ್ದೀನಿ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರಂತಹ ನಾಯಕರನ್ನ ಕಡೆಗಣಿಸಿದ್ದಾರೆ, ಇದು ಬಿಜೆಪಿಗೆ ಶಾಪವಾಗಿದೆ. ವರ್ಚಸ್ಸು ಇರುವವರನ್ನ ಬೆಳೆಯೋಕೆ ಬಿಡ್ತಿಲ್ಲ. ವಿಜಯೇಂದ್ರ ಅಂತಹವರನ್ನ ಮೂಲೆಗುಂಪು ಮಾಡ್ತಿದ್ದಾರೆ.

ನಾನು ನೇರವಾಗಿಯೇ ಮಾತನಾಡಿದ್ದೇನೆ. ಅದಕ್ಕೆ ಶಿಸ್ತು ಕ್ರಮ ತೆಗೆದುಕೊಂಡಿದ್ದಾರೆ. ನಾನು ಪಕ್ಷ, ಮೋದಿ, ನಡ್ಡಾ, ಅಮಿತ್ ಶಾ ವಿರುದ್ಧ ಮಾತನಾಡಿಲ್ಲ. ನಾನು ಮಾತಾಡಿರೋದು ಕೆಲ ವ್ಯಕ್ತಿಗಳ ದೌರ್ಬಲ್ಯವನ್ನ ಅಷ್ಟೇ. ಅದನ್ನ ನೇರವಾಗಿ ಖಂಡಿಸಿದ್ದೇನೆ ಎಂದು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments