Webdunia - Bharat's app for daily news and videos

Install App

ಅಕ್ರಮ ಮರಳು ಸಾಗಾಣಿಕೆ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ: ಡಿಸಿ ಎಚ್ಚರಿಕೆ

Webdunia
ಶನಿವಾರ, 27 ಅಕ್ಟೋಬರ್ 2018 (19:18 IST)
ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುವ ದಂಧೆಯಲ್ಲಿ ತೊಡಗಿರುವವರನ್ನು ಗುರುತಿಸಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.

ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು, ಚಿತ್ತಾಪುರ ತಾಲೂಕಿನ ಮುಡಬೂಳ ಬ್ಯಾರೇಜ್ ಹತ್ತಿರ ಕಾಗೀನಾ ನದಿಯಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವುದನ್ನು ಪರಿಶೀಲಿಸಿ ಮಾತನಾಡಿದರು. ಅಕ್ರಮವಾಗಿ ಮರಳು ಸಾಗಿಸಲು ಮುಖ್ಯ ರಸ್ತೆಯಿಂದ ನದಿಯ ದಡದವರೆಗೆ ನಿರ್ಮಿಸಿರುವ ರಸ್ತೆಯಲ್ಲಿ ದನಕರುಗಳು ಕುಡಿಯುವ ನೀರಿಗೆ ಹೋಗಲು ತೊಂದರೆಯಾಗದಂತೆ ವಾಹನಗಳು ಬರದಂತೆ ಎಲ್ಲ ಸಂಪರ್ಕ ರಸ್ತೆಗಳಿಗೆ ದಡದ ಹತ್ತಿದ ಗುಂಡಿ ತೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ನದಿಪಾತ್ರದಲ್ಲಿ ರಸ್ತೆಗಳನ್ನು ನಿರ್ಮಿಸಿ ವ್ಯವಸ್ಥಿತವಾಗಿ ಅಕ್ರಮ ಮರಳು ದಂಧೆ ನಡೆಸಲಾಗುತ್ತಿದೆ. ಈ ದಂಧೆಯಲ್ಲಿ ನದಿ ದಡದ ಅಕ್ಕಪಕ್ಕದ ಗ್ರಾಮಸ್ಥರು ಭಾಗಿಯಾಗಿರುತ್ತಾರೆ. ಅವರಿಂದ ಸೂಕ್ತ ಮಾಹಿತಿ ಪಡೆದು ಅಕ್ರಮ ಮರಳು ದಂಧೆ ನಡೆಸುವ ಮುಖ್ಯಸ್ಥರನ್ನು ಗುರುತಿಸಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ಪೊಲೀಸ್ ಇಲಾಖೆಯವರು ಪದೇ ಪದೇ ಆಕಸ್ಮಿಕವಾಗಿ ದಾಳಿ ಮಾಡುವ ಮೂಲಕ ಅಕ್ರಮವಾಗಿ ಮರಳು ಸಾಗಿಸುವ ಹಾಗೂ ಮರಳು ತೆಗೆಯುವ ವಾಹನಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.

ಚಿತ್ತಾಪುರ ತಾಲೂಕಿನ ಕುಂದನೂರ ಮರಳು ನಿಕ್ಷೇಪ ಹರಾಜಾಗಿದ್ದು, ದಂಡೋತಿ ಮತ್ತು ಮುತ್ತಗಾ ಮರಳು ನಿಕ್ಷೇಪಗಳನ್ನು ಹರಾಜು ಮಾಡುವ ಪ್ರಕ್ರಿಯೆ ನಡೆದಿದೆ. ಈ ಮರಳು ನಿಕ್ಷೇಪಗಳಿಂದ ಅಕ್ರಮವಾಗಿ ಮರಳನ್ನು ಸಾಗಿಸುವ ವಾಹನಗಳ ಮೇಲೆ ನಿಗಾವಹಿಸಿ ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments