ಅಕ್ರಮ ಮರಳು ಸಾಗಾಣಿಕೆ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ: ಡಿಸಿ ಎಚ್ಚರಿಕೆ

Webdunia
ಶನಿವಾರ, 27 ಅಕ್ಟೋಬರ್ 2018 (19:18 IST)
ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುವ ದಂಧೆಯಲ್ಲಿ ತೊಡಗಿರುವವರನ್ನು ಗುರುತಿಸಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.

ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು, ಚಿತ್ತಾಪುರ ತಾಲೂಕಿನ ಮುಡಬೂಳ ಬ್ಯಾರೇಜ್ ಹತ್ತಿರ ಕಾಗೀನಾ ನದಿಯಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವುದನ್ನು ಪರಿಶೀಲಿಸಿ ಮಾತನಾಡಿದರು. ಅಕ್ರಮವಾಗಿ ಮರಳು ಸಾಗಿಸಲು ಮುಖ್ಯ ರಸ್ತೆಯಿಂದ ನದಿಯ ದಡದವರೆಗೆ ನಿರ್ಮಿಸಿರುವ ರಸ್ತೆಯಲ್ಲಿ ದನಕರುಗಳು ಕುಡಿಯುವ ನೀರಿಗೆ ಹೋಗಲು ತೊಂದರೆಯಾಗದಂತೆ ವಾಹನಗಳು ಬರದಂತೆ ಎಲ್ಲ ಸಂಪರ್ಕ ರಸ್ತೆಗಳಿಗೆ ದಡದ ಹತ್ತಿದ ಗುಂಡಿ ತೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ನದಿಪಾತ್ರದಲ್ಲಿ ರಸ್ತೆಗಳನ್ನು ನಿರ್ಮಿಸಿ ವ್ಯವಸ್ಥಿತವಾಗಿ ಅಕ್ರಮ ಮರಳು ದಂಧೆ ನಡೆಸಲಾಗುತ್ತಿದೆ. ಈ ದಂಧೆಯಲ್ಲಿ ನದಿ ದಡದ ಅಕ್ಕಪಕ್ಕದ ಗ್ರಾಮಸ್ಥರು ಭಾಗಿಯಾಗಿರುತ್ತಾರೆ. ಅವರಿಂದ ಸೂಕ್ತ ಮಾಹಿತಿ ಪಡೆದು ಅಕ್ರಮ ಮರಳು ದಂಧೆ ನಡೆಸುವ ಮುಖ್ಯಸ್ಥರನ್ನು ಗುರುತಿಸಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ಪೊಲೀಸ್ ಇಲಾಖೆಯವರು ಪದೇ ಪದೇ ಆಕಸ್ಮಿಕವಾಗಿ ದಾಳಿ ಮಾಡುವ ಮೂಲಕ ಅಕ್ರಮವಾಗಿ ಮರಳು ಸಾಗಿಸುವ ಹಾಗೂ ಮರಳು ತೆಗೆಯುವ ವಾಹನಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.

ಚಿತ್ತಾಪುರ ತಾಲೂಕಿನ ಕುಂದನೂರ ಮರಳು ನಿಕ್ಷೇಪ ಹರಾಜಾಗಿದ್ದು, ದಂಡೋತಿ ಮತ್ತು ಮುತ್ತಗಾ ಮರಳು ನಿಕ್ಷೇಪಗಳನ್ನು ಹರಾಜು ಮಾಡುವ ಪ್ರಕ್ರಿಯೆ ನಡೆದಿದೆ. ಈ ಮರಳು ನಿಕ್ಷೇಪಗಳಿಂದ ಅಕ್ರಮವಾಗಿ ಮರಳನ್ನು ಸಾಗಿಸುವ ವಾಹನಗಳ ಮೇಲೆ ನಿಗಾವಹಿಸಿ ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments