Webdunia - Bharat's app for daily news and videos

Install App

ಕಾನೂನು ಬಾಹಿರ ಸಿಮೆಂಟ್ ಕಾರ್ಖಾನೆ ಸ್ಥಾಪನೆ?

Webdunia
ಗುರುವಾರ, 7 ಫೆಬ್ರವರಿ 2019 (19:57 IST)
ಕಾನೂನು ಬಾಹಿರವಾಗಿ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ ಎಂದು ಮಾಜಿ ಸಚಿವರೊಬ್ಬರು ಆರೋಪ ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ ಎಂದು ಮಾಜಿ ಸಚಿವ ಎಸ್.ಕೆ.ಕಾಂತಾ ಆರೋಪಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಜಮೀನು ಪರಿವರ್ತನೆ ಮಾಡಿಕೊಳ್ಳದೆಯೇ ಶ್ರೀ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ. 400 ಎಕರೆ ವ್ಯಾಪ್ತಿಯಲ್ಲಿ ಕಾರ್ಖಾನೆ ನಿರ್ಮಿಸಲಾಗಿದೆ. ಜಿಲ್ಲಾಧಿಕಾರಿಗಳು ಕೃಷಿಯೇತರ ಎಂದು ಜಮೀನು ಪರಿವರ್ತನೆ  ಮಾಡದಿದ್ದರೂ ಕಾರ್ಖಾನೆ ಹೇಗೆ ಅಸ್ತಿತ್ವಕ್ಕೆ ಹೇಗೆ ಬಂದಿದೆ ಎಂದು ಕಾಂತಾ ಪ್ರಶ್ನಿಸಿದ್ದಾರೆ. ಸಿಮೆಂಟ್ ಕಾರ್ಖಾನೆ ಅಸ್ತಿತ್ವಕ್ಕೆ ಬರುವಲ್ಲಿ ಹಲವು ಐಎಎಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ. ಮೀಸಲು ಅರಣ್ಯ ಪ್ರದೇಶದ 320 ಎಕರೆಯನ್ನೂ ಕಾರ್ಖಾನೆಗೆ ನೀಡಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಕಾಂತಾ ಕಿಡಿಕಾರಿದ್ದಾರೆ.

ಕಾನೂನು ಉಲ್ಲಂಘಿಸಿ ಅಸ್ತಿತ್ವಕ್ಕೆ ಬಂದ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ಕಾರ್ಖಾನೆಯ ಅಕ್ರಮಕ್ಕೆ ಸಹಕರಿಸಿದ ಅಧಿಕಾರಗಳ ಮೇಲೂ ಮೇಲೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments