ಕಾನೂನು ಬಾಹಿರ ಸಿಮೆಂಟ್ ಕಾರ್ಖಾನೆ ಸ್ಥಾಪನೆ?

Webdunia
ಗುರುವಾರ, 7 ಫೆಬ್ರವರಿ 2019 (19:57 IST)
ಕಾನೂನು ಬಾಹಿರವಾಗಿ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ ಎಂದು ಮಾಜಿ ಸಚಿವರೊಬ್ಬರು ಆರೋಪ ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ ಎಂದು ಮಾಜಿ ಸಚಿವ ಎಸ್.ಕೆ.ಕಾಂತಾ ಆರೋಪಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಜಮೀನು ಪರಿವರ್ತನೆ ಮಾಡಿಕೊಳ್ಳದೆಯೇ ಶ್ರೀ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡಲಾಗಿದೆ. 400 ಎಕರೆ ವ್ಯಾಪ್ತಿಯಲ್ಲಿ ಕಾರ್ಖಾನೆ ನಿರ್ಮಿಸಲಾಗಿದೆ. ಜಿಲ್ಲಾಧಿಕಾರಿಗಳು ಕೃಷಿಯೇತರ ಎಂದು ಜಮೀನು ಪರಿವರ್ತನೆ  ಮಾಡದಿದ್ದರೂ ಕಾರ್ಖಾನೆ ಹೇಗೆ ಅಸ್ತಿತ್ವಕ್ಕೆ ಹೇಗೆ ಬಂದಿದೆ ಎಂದು ಕಾಂತಾ ಪ್ರಶ್ನಿಸಿದ್ದಾರೆ. ಸಿಮೆಂಟ್ ಕಾರ್ಖಾನೆ ಅಸ್ತಿತ್ವಕ್ಕೆ ಬರುವಲ್ಲಿ ಹಲವು ಐಎಎಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ. ಮೀಸಲು ಅರಣ್ಯ ಪ್ರದೇಶದ 320 ಎಕರೆಯನ್ನೂ ಕಾರ್ಖಾನೆಗೆ ನೀಡಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಕಾಂತಾ ಕಿಡಿಕಾರಿದ್ದಾರೆ.

ಕಾನೂನು ಉಲ್ಲಂಘಿಸಿ ಅಸ್ತಿತ್ವಕ್ಕೆ ಬಂದ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ಕಾರ್ಖಾನೆಯ ಅಕ್ರಮಕ್ಕೆ ಸಹಕರಿಸಿದ ಅಧಿಕಾರಗಳ ಮೇಲೂ ಮೇಲೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಕುಡಿದ ಅಮಲಿನಲ್ಲಿ ಬೈಕರ್ ಮಿಡ್‌ನೈಟ್ ಡ್ರಾಮಾಗೆ ಪೊಲೀಸರು ಸುಸ್ತು

ಜೀವಂತವಾಗಿರುವಾಗಲೇ 12ಲಕ್ಷ ವೆಚ್ಚದಲ್ಲಿ ತನ್ನ ಸಮಾಧಿ ನಿರ್ಮಿಸಿದ ವಿಚಿತ್ರ ವ್ಯಕ್ತಿ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments