Webdunia - Bharat's app for daily news and videos

Install App

ಸಿದ್ದರಾಮಯ್ಯ ಸರಕಾರದಿಂದ ಅಕ್ರಮ ಗಣಿಗಾರಿಕೆ ಅವಕಾಶ: ಎಸ್.ಆರ್ ಹಿರೇಮಠ

Webdunia
ಶುಕ್ರವಾರ, 13 ಜುಲೈ 2018 (20:43 IST)
ರಾಜ್ಯದಲ್ಲಿ   ಹಿಂದೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ  ಸರ್ಕಾರ, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿ ಮಲೈ ಅರಣ್ಯ ಪ್ರದೇಶದಲ್ಲಿ ಖಾಸಗಿ ಗಣಿ ಕಂಪನಿಗಳಿಗೆ ಅಕ್ರಮ ಗಣಿಗಾರಿಕೆ ಮಾಡಲು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟಿದೆ ಅಂತ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.  

ಅಕ್ರಮ ಗಣಿಗಾರಿಕೆಯಿಂದ ಅಲ್ಲಿರುವ ಸಾವಿರಾರು ವರ್ಷಗಳ ಇತಿಹಾಸ ಇರುವ ಐತಿಹಾಸಿಕ ಸ್ಮಾರಕವಾದ ಪಾರ್ವತಿ - ಕಾರ್ತಿಕೆಯನ್ ದೇಗುಲವನ್ನು ಬಳ್ಳಾರಿ ಪ್ರಮುಖ ಗಣಿ ಕಂಪನಿಗಳಾದ ಜಿಂದಾಲ್ ಮತ್ತು ಬಲ್ಡೋಟಾ ಕಂಪನಿಗಳು ಅಪೋಸನ ಪಡೆಯುತ್ತಿವೆ ಎಂದುಕಳವಳ ವ್ಯಕ್ತಪಡಿಸಿರು. ಹೀಗಾಗಿ ದೇಗುಲವನ್ನು ರಕ್ಷಿಸಲು ಸಿಇಸಿ ಸಮಾಜ ಪರಿವರ್ತನಾ ಸಮುದಾಯ ಒತ್ತಾಯಿಸಿದೆ ಎಂದರು. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಗಸ್ಟ್‌ 18, 2017 ರಂದು ಸ್ಮಾರಕಗಳ ಇರುವ ಜಾಗದಲ್ಲಿ ಕೇವಲ 300 ಮೀಟರ್ ಅಂತರದಲ್ಲಿ  ಗಣಿಗಾರಿಕೆ ನಡೆಸಲು ಕಾಯ್ದೆಗೆ ತಿದ್ದುಪಡಿ ಮಾಡಿದೆ.

ಇದು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಹುನ್ನಾರ ಅಡಗಿದೆ. ಹಾಗಿಲ್ಲದಿದ್ದರೆ, ಸುಪ್ರೀಂ ಕೋರ್ಟ್ ತೀರ್ಪು ಮತ್ತು ನಮ್ಮದೇ ರಾಜ್ಯ ಸರ್ಕಾರ ಹಿಂದೆ ಮಾಡಿದ ಕಾನೂನು ಮುರಿದು ರೀತಿಯ ಅವಕಾಶ ಮಾಡಿಕೊಡುತ್ತಿರಲಿಲ್ಲ ಎಂದು ಹಿರೇಮಠ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments