Select Your Language

Notifications

webdunia
webdunia
webdunia
webdunia

ಅಕ್ರಮ ಅದಿರು ರಫ್ತು ಪ್ರಕರಣ: ರೆಡ್ಡಿ ಮನೆ ಮೇಲೆ ಎಸ್ಐಟಿ ದಾಳಿ

ಶಿರಗುಪ್ಪ
ಅಕ್ರಮವಾಗಿ ಅದಿರನ್ನು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾಧಿಕಾರಿಗಳ ತಂಡವು ಇಂದು ಮಾಜಿ ಸಚಿವ ಗಾಲಿ ಜನಾರ್ಧನ್ ರೆಡ್ಡಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಹಲವು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ. 
 
ಹೌದು, ಇಂದು ಬೆಳಗ್ಗೆ ಬಳ್ಳಾರಿ ನಗರದ ಶಿರಗುಪ್ಪ ರಸ್ತೆಯಲ್ಲಿರುವ ರೆಡ್ಡಿ ನಿವಾಸವನ್ನು ತಲುಪಿದ ತನಿಖಾಧಿಕಾರಿಗಳ ತಂಡ, ನಿವಸದಲ್ಲಿದ್ದ ಹಲವು ದಾಕಲೆಗಳನ್ನು ವಶಕ್ಕೆ ಪಡೆಯಿತು. ಬಳಿಕ ಆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿತು. ಆದರೆ ತನಿಖಾಧಿಕಾರಿಗಳು ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಡಲಿಲ್ಲ. 
 
ಇನ್ನು ಗಾಲಿ ಜನಾರ್ಧನ ರೆಡ್ಡಿ ಅವರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲ ವರ್ಷಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

Share this Story:

Follow Webdunia kannada