Webdunia - Bharat's app for daily news and videos

Install App

ಅಕ್ರಮ ಮರಳು ಸಂಗ್ರಹಣೆ: ಜಮೀನು ಮಾಲೀಕರ ಮೇಲೆ ಕೇಸ್ ದಾಖಲಿಸಲು ಸಚಿವರ ಖಡಕ್ ಸೂಚನೆ

Webdunia
ಭಾನುವಾರ, 4 ನವೆಂಬರ್ 2018 (18:30 IST)
ಕಲಬುರಗಿ ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಣೆ ಮಾಡಿಟ್ಟುಕೊಂಡಿರುವಂತಹ ಜಮೀನುಗಳ ಮಾಲೀಕರ ಮೇಲೆ ಯಾವುದೇ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವಂತೆ  ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಅಕ್ರಮ ಮರಳು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕಂದಾಯ, ಪೊಲೀಸ್, ಲೋಕೋಪಯೋಗಿ, ಅರಣ್ಯ, ಆರ್.ಟಿ.ಓ ಇಲಾಖೆಗಳ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಬುರಗಿ ಜಿಲ್ಲೆಯ ವಿವಿಧೆಡೆ ವ್ಯಾಪಕವಾಗಿ ಅಕ್ರಮ ಮರಳು ಸಾಗಣೆ ಮತ್ತು ಸಂಗ್ರಹಣೆ ಕುರಿತು ದೂರು ಕೇಳಿಬರುತ್ತಿವೆ.

ಮುಂದಿನ 2-3 ದಿನಗಳಲ್ಲಿ ಅಕ್ರಮ ಸಂಗ್ರಹಣೆ ಸ್ಥಳಗಳಿಗೆ ಸಹಾಯಕ ಆಯುಕ್ತರು, ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಸಂಬಂಧಿಸಿದ ಜಮೀನು ಮಾಲೀಕರ ಮೇಲೆ ಹಾಗೂ ಟ್ರ್ಯಾಕ್ಟರ್, ಟಿಪ್ಪರ್ ಮಾಲೀಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕೇಸ್ ದಾಖಲಿಸಿ ನವೆಂಬರ್ 5ರೊಳಗೆ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ  ನೀಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments