Webdunia - Bharat's app for daily news and videos

Install App

ಅಕ್ರಮ ಮರಳುಗಾರಿಕೆ: ಎಂಜಿನಿಯರ್‌ಗಳಿಗೆ ನೋಟಿಸ್ ಜಾರಿ

Webdunia
ಶನಿವಾರ, 24 ಜನವರಿ 2015 (09:40 IST)
ತಾಲೂಕಿನ ಹಗರಿ ನದಿಯ ವಣೇನೂರು ತೀರದಲ್ಲಿ ನಿಯಮ ಉಲ್ಲಂಘಿಸಿ ಎತೇಚ್ಚವಾಗಿ  ಮರಳು ತೆಗೆಯುವ ಮೂಲಕ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಲೋಖೋಪಯೋಗಿ ಇಲಾಖೆಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ. 
 
ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಜಿಲ್ಲಾ ದಂಢಾಧಿಕಾರಿಗಳು ಸಂಪೂರ್ಣ ವರದಿಯನ್ನು ಸಿದ್ದಪಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಿದ್ದರು ಎನ್ನಲಾಗಿದ್ದು, ವರದಿಯನ್ನು ಜಿಲ್ಲಾಧಿಕಾರಿಗಳು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ. ಬಳಿಕ ಅಕ್ರಮ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಲೋಖೋಪಯೋಗಿ ಇಲಾಖೆಯ ಎಂಜಿನಿಯರ್‌ಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. 
 
ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಗಳು, ಇಲ್ಲಿ ಮರಳು ತೆಗೆಯುತ್ತಿದ್ದ ಗುತ್ತಿಗೆದಾರರು ಪರವಾನಿಗೆಯನ್ನು ಪಡೆದಿದ್ದರು. ಆದರೆ ನಿಗಧಿಪಡಿಸಿದ ನಿಯಮಕ್ಕಿಂತ ಹೆಚ್ಚು ಮರಳನನ್ನು ತೆಗೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ವರದಿ ಸಲ್ಲಿಸುವಂತೆ ಲೋಖೋಪಯೋಗಿ ಇಲಾಖೆಯ ಎಂಜಿನಿಯರ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು. 
 
ಮೂಲಗಳ ಪ್ರಕಾರ, ಈಗಾಗಲೇ ಜಿಲ್ಲಾಧಿಕಾರಿಗಳ ನೋಟಿಸ್‌ಗೆ ಎಂಜಿನಿಯರ್‌ಗಳು ಉತ್ತರಿಸಿದ್ದು, ಯಾವುದೇ ಅಕ್ರಮ ನಡೆದಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments