Webdunia - Bharat's app for daily news and videos

Install App

ಅಕ್ರಮ ಸಂಬಂಧ : ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ!

Webdunia
ಸೋಮವಾರ, 26 ಜೂನ್ 2023 (08:07 IST)
ಚಿಕ್ಕಬಳ್ಳಾಪುರ : ತನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹಿನ್ನೆಲೆ ಪ್ರಿಯಕರನ ಕತ್ತು ಸೀಳಿ ಆಕೆಯ ಪತಿ ರಕ್ತ ಕುಡಿದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ.
 
ಚಿಂತಾಮಣಿ ತಾಲೂಕಿನ ಬಟ್ಲಪಲ್ಲಿ ನಿವಾಸಿ ವಿಜಯ್ ತನ್ನ ಪತ್ನಿಯ ಪ್ರಿಯಕರನಾದ ಬಾಗೇಪಲ್ಲಿ ತಾಲೂಕು ಮಂಡಂಪಲ್ಲಿ ನಿವಾಸಿ ಮಾರೇಶ್ ಎಂಬಾತನ ಕತ್ತು ಸೀಳಿ ರಕ್ತ ಹೀರಿದ್ದಾನೆ. ಅಸಲಿಗೆ ವಿಜಯ್ ಹಾಗೂ ಮಾರೇಶ್ ಇಬ್ಬರು ಚಿಂತಾಮಣಿ ನಗರದಲ್ಲಿ ವಾಸವಾಗಿದ್ದು, ಇಬ್ಬರೂ ಸಹ ಟಾಟಾ ಏಸ್ ವಾಹನದಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದರು.

ತನ್ನ ಹೆಂಡತಿ ಮಾಲಾ ಜೊತೆ ಮಾರೇಶ್ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡ ವಿಜಯ್, ಮಾರೇಶ್ನನ್ನು ಕೊಲೆ ಮಾಡುವ ಉದ್ದೇಶದಿಂದ ಟಾಟಾ ಏಸ್ ಗಾಡಿ ತೆಗೆದುಕೊಂಡು ಬಾ ಬಾಡಿಗೆ ಇದೆ, ಹೋಗಿ ಬರೋಣ ಎಂದು ಕರೆದುಕೊಂಡು ಹೋಗಿ ಸಿದ್ದೇಪಲ್ಲಿ ಕ್ರಾಸ್ ಬಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ನಡೆಸಿದ್ದಾನೆ. 

ವಿಜಯ್ ಚಾಕುವಿನಿಂದ ಮಾರೇಶ್ ಕತ್ತು ಸೀಳಿದ್ದು, ರಕ್ತ ಹೊರಚಿಮ್ಮಿದಾಗ ಅದನ್ನು ಕುಡಿದು ತನ್ನ ಕೋಪ ಪ್ರತಾಪ ತೀರಿಸಿಕೊಂಡಿದ್ದಾನೆ. ಈ ಘಟನೆ ಜೂನ್ 19ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಜಯ್ ಜೊತೆ ಇದ್ದ ಸ್ನೇಹಿತ ಈ ಕತ್ತು ಸೀಳಿ ರಕ್ತ ಕುಡಿಯುವ ವಿಡಿಯೋವನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂದಿನ ಸುದ್ದಿ
Show comments