Select Your Language

Notifications

webdunia
webdunia
webdunia
webdunia

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಗ್ನಿ ಶ್ರೀಧರ್

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಗ್ನಿ ಶ್ರೀಧರ್
ಬೆಂಗಳೂರು , ಶುಕ್ರವಾರ, 10 ಫೆಬ್ರವರಿ 2017 (13:36 IST)
ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸೆಷನ್ ಕೋರ್ಟ್‌ಗೆ ಅಗ್ನಿ ಶ್ರೀಧರ್ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಮೂರು ದಿನಗಳ ಹಿಂದೆ ಅಗ್ನಿ ಶ್ರೀಧರ್ ನಿವಾಸದ ಮೇಲೆ ದಾಳಿ ಮಾಡಿದ್ದ ಪೊಲೀಸರಿಗೆ ಲೈಸೆನ್ಸ್ ಇಲ್ಲದ ಗನ್‌ಗಳು ಪತ್ತೆಯಾಗಿದ್ದವು. ಪೊಲೀಸರು ಅಗ್ನಿ ಶ್ರೀಧರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
 
ಅನಾರೋಗ್ಯದ ನೆಪವೊಡ್ಡಿದ ಶ್ರೀಧರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿಗಳು ಸಭೆ ನಡೆಸಿ ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ಮಾಡುವ ಸಂಚು ರೂಪಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.  
 
ನಗರದ ಹೊರವಲಯದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ರೌಡಿಗಳು ಸಭೆ ನಡೆಸುತ್ತಿರುವ ಮಾಹಿತಿ ಪಡೆದ ಪೊಲೀಸರು ರೌಡಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಣ್ಣಾಡಿಎಂಕೆ ಶಾಸಕರ ನಾಪತ್ತೆ ಕುರಿತು ಪೊಲೀಸರ ಬಳಿ ವರದಿ ಕೇಳಿದ ಮದ್ರಾಸ್ ಹೈಕೋರ್ಟ್