Webdunia - Bharat's app for daily news and videos

Install App

ಬೇನಾಮಿ ಆಸ್ತಿ ಪ್ರಕರಣ: ಕೋರ್ಟ್‌ನಿಂದ ಯಡಿಯೂರಪ್ಪ, ಈಶ್ವರಪ್ಪಗೆ ಬಿಗ್ ರಿಲೀಫ್

Webdunia
ಗುರುವಾರ, 29 ಡಿಸೆಂಬರ್ 2016 (15:47 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 
ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ವಿರುದ್ಧ ವಕೀಲ ವಿನೋದ್ ಅವರು ಸಲ್ಲಿಸಿದ್ದ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿದೆ. 
 
ಹುಣಸೇಕಟ್ಟಿ ಜಂಕ್ಷನ್‌ನಲ್ಲಿ 67 ಎಕರೆ ಅರಣ್ಯ ಪ್ರದೇಶ ಒತ್ತುವರಿ, ಬಿಎಸ್‌ವೈ ಪುತ್ರಿ ಅರುಣಾದೇವಿ ಅವರು ಪತ್ರಕರ್ತರ ಹೆಸರಿನಲ್ಲಿ 4 ನಿವೇಶನ ಖರೀದಿಸಿದ ಆರೋಪ ಹಾಗೂ ಕೋಟೆಗಂಗೂರಿನ ಧವಳಗಿರಿ ಪ್ರಾಪರ್ಟಿಸ್ ಹೆಸರಿನಲ್ಲಿ ಅಕ್ರಮವಾಗಿ ಭೂಮಿ ಖರೀದಿಸಲಾಗಿದೆ ಎಂದು ವಕೀಲ ವಿನೋದ್ ಆರೋಪಿಸಿದ್ದರು. 
 
ಇನ್ನೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು 40 ಕೋಟಿಗೂ ಅಧಿಕ ಮೌಲ್ಯದ ಆಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ದೂರು ಸಲ್ಲಿಸಲಾಗಿತ್ತು. 
 
ಈ ಪ್ರಕರಣಗಳಿಗೆ ದೂರುದಾರ ವಕೀಲ ವಿನೋದ್ ಸೂಕ್ತ ದಾಖಲೆ ಸಲ್ಲಿಸಿಲ್ಲ ಎಂದು ಲೋಕಾಯುಕ್ತ ಕೋರ್ಟ್, ಇಬ್ಬರು ನಾಯಕರಿಗೆ ರಿಲೀಫ್ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments