Webdunia - Bharat's app for daily news and videos

Install App

ಐ ಎಂ. ಎ. ವಂಚನೆ ಪ್ರಕರಣ ಅಡವಿಟ್ಟ ಚಿನ್ನ ವಾಪಸ್ ವಿಶೇಷ ಅಧಿಕಾರಿ ಸೂಚನೆ

Webdunia
ಶುಕ್ರವಾರ, 1 ಏಪ್ರಿಲ್ 2022 (15:59 IST)
ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲಕ್ಕಾಗಿ ಅಡಮಾನವಿಟ್ಟ ಚಿನ್ನದ ಆಭರಣವನ್ನು ಏಪ್ರಿಲ್ 6 ರಿಂದ ಗ್ರಾಹಕರಿಗೆ ಹಿಂತಿರುಗಿಸಲು ಸಕ್ಷಮ ಪ್ರಾಧಿಕಾರದ ವಿಶೇಷಾಧಿಕಾರಿ ನಿರ್ಧರಿಸಿದ್ದಾರೆ..
ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಐಎಂಎ ಕಂಪನಿ ಬಹುಕೋಟಿ ರೂ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಸಂಸ್ಥೆಯಲ್ಲಿ ಸಾಲಕ್ಕಾಗಿ ಅಡಮಾನವಿಟ್ಟ ಚಿನ್ನದ ಆಭರಣವನ್ನು ಏಪ್ರಿಲ್ 6ರಿಂದ ಹಿಂತಿರುಗಿಸಲು ಸಕ್ಷಮ ಪ್ರಾಧಿಕಾರದ ವಿಶೇಷಾಧಿಕಾರಿ ನಿರ್ಧರಿಸಿದ್ದಾರೆ. ಚಿನ್ನದ ಸಾಲಗಾರರು ಬಾಕಿ ಸಾಲದ ಹಣ ಮತ್ತು ಭದ್ರತಾ ಶುಲ್ಕವನ್ನು ಏಪ್ರಿಲ್ 5ರ ಸಂಜೆ 5 ಗಂಟೆ ಒಳಗಾಗಿ ಪಾವತಿಸಬೇಕು.
 
ಬಾಕಿ ಮೊತ್ತ ತಿಳಿದುಕೊಳ್ಳಲು ವೆಬ್‌ಸೈಟ್‌ https://imalaims.karnataka. gov.inಗೆ ಹೋಗಿ ಆನಂತರ ಕ್ಲೈಮ್ ಸಬ್‌ಮಿಷನ್ ಪ್ರೊಸೆಸ್ ಕ್ಲಿಕ್ ಮಾಡಿ, ಐಎಂಎ ಗೋಲ್ಡ್ ಲೋನ್ ಡೀಟೆಲ್ಸ್ ಆಯ್ಕೆ ಮಾಡಿದರೆ ಮಾಹಿತಿ ಲಭ್ಯವಾಗಲಿದೆ ಎಂದು ಸಕ್ಷಮ ಪ್ರಾಧಿಕಾರದ ವಿಶೇಷಾಧಿಕಾರಿ ತಿಳಿಸಿದ್ದಾರೆ.
 
ಸಾಲದ ಮೊತ್ತವನ್ನು ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಎನ್‌ಇಎಫ್‌ಟಿ ಅಥವಾ ಆರ್‌ಟಿಜಿಎಸ್ ಮೂಲಕವೇ ಪಾವತಿಸಬೇಕು. ಹೆಚ್ಚಿನ ಮಾಹಿತಿಯನ್ನು 080-2956 5353, 2956 6556, 2960 4556 ಕರೆ ಮಾಡಿ ತಿಳಿದುಕೊಳ್ಳಬಹುದು. ಸಕ್ಷಮ ಪ್ರಾಧಿಕಾರದ ವಿಳಾಸ : ಅಂಬೇಡ್ಕರ್‌ ವಿವಿ ಟವರ್, 3ನೇ ಮಹಡಿ, ಪೋಡಿಯಂ ಬ್ಲಾಕ್, ಬೆಂಗಳೂರು ಎಂದು ವಿಶೇಷಾಧಿಕಾರಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments