Select Your Language

Notifications

webdunia
webdunia
webdunia
webdunia

ಗ್ಯಾರಂಟಿ ಯೋಜನೆಗಳ ಜಾರಿ ಕಾಂಗ್ರೆಸ್ ಗೆ ಕಷ್ಟ ಆಗ್ತಿದೆ-ಮಾಜಿ ಸಚಿವ ಶ್ರೀರಾಮುಲು

ಗ್ಯಾರಂಟಿ ಯೋಜನೆಗಳ ಜಾರಿ ಕಾಂಗ್ರೆಸ್ ಗೆ ಕಷ್ಟ ಆಗ್ತಿದೆ-ಮಾಜಿ ಸಚಿವ ಶ್ರೀರಾಮುಲು
bangalore , ಗುರುವಾರ, 8 ಜೂನ್ 2023 (21:56 IST)
ಬಿಜೆಪಿ ಕಛೇರಿಯಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.ಗ್ಯಾರಂಟಿ ಯೋಜನೆಗಳ ಜಾರಿ ಕಾಂಗ್ರೆಸ್ ಗೆ ಕಷ್ಟ ಆಗ್ತಿದೆ.ಸರ್ಕಾರದ ಖಜಾನೆ ಖಾಲಿ ಆಗ್ತಿದೆ.ಉಚಿತ ಕರೆಂಟ್ ಸಿಗುತ್ತೆ ಅಂತ ನಂಬಿದ ಬಡವರಿಗೆ ಮೋಸ ಮಾಡಿದಾರೆ.ಕರೆಂಟ್ ದರ ಇನ್ನಷ್ಟು ಹೆಚ್ಚಿಗೆ ಮಾಡಿದಾರೆ.ಇದನ್ನೆಲ್ಲ ಜನ ಗಮನಿಸ್ತಿದಾರೆ.ಗ್ಯಾರಂಟಿಗಳಲ್ಲಿ ಷರತ್ತುಗಳನ್ನು ಹಾಕಿದಾರೆ.ಇವರ ಗ್ಯಾರಂಟಿಗಳು ಜಾರಿಗೆ ಬರುವ ಲಕ್ಷಣ ಕಾಣಿಸ್ತಿಲ್ಲ.ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸ್ತಾರೆ ಎಂದು ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಉಚಿತವಾಗಿ ಗ್ಯಾರಂಟಿಗಳನ್ನು ಕೊಡ್ತೀವಿ ಅಂತ ಹೇಳಿ ಷರತ್ತುಗಳನ್ನು ಹಾಕಿದಾರೆ.ಮುಂದಿನ ದಿನಗಳಲ್ಲಿ ಜನ ಸುಮ್ಮನಿರಲ್ಲ.ಜನ ಬೀದಿಗೆ ಇಳಿದು ತಮ್ಮ ಹಕ್ಕುಗಳನ್ನು ಪಡೆದುಕೊಳ್ತಾರೆ.ಕಾಂಗ್ರೆಸ್ ಶಾಸಕರ ಮನೆಗಳಿಗೂ ಜನ ನುಗ್ಗುವ ಕೆಲಸ ಮಾಡ್ತಾರೆ.ಕಾಂಗ್ರೆಸ್ ನವರಿಗೆ ಜನ ತಕ್ಕ ಪಾಠ ಕಲಿಸ್ತಾರೆ ಎಂದು ಸಚಿವ ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ