Publish Date: Sun, 27 Nov 2022 (08:29 IST)
Updated Date: Sun, 27 Nov 2022 (09:30 IST)
ಶಿವಮೊಗ್ಗ : ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡೋ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದ್ದಾರೆ.
ಬಿಜೆಪಿಯ ಪ್ರಮುಖ ಅಜೆಂಡಾಗಳಲ್ಲಿ ಒಂದಾದ ಏಕರೂಪ ನಾಗರಿಕ ಸಂಹಿತೆಯನ್ನು ದೇಶಾದ್ಯಂತ ಬಿಡಿಬಿಡಿಯಾಗಿ ಜಾರಿಗೆ ತರುವ ಪ್ರಯತ್ನಗಳು ಆರಂಭವಾದಂತೆ ಕಾಣುತ್ತಿದೆ.
ಇತ್ತೀಚಿಗೆ ಮುಗಿದ ಹಿಮಾಚಲ ಪ್ರದೇಶ ಚುನಾವಣೆ ವೇಳೆಯೂ ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಸಮಿತಿ ರಚಿಸಿತ್ತು. ಇದೀಗ ಕರ್ನಾಟಕದಲ್ಲಿಯೂ ಬಿಜೆಪಿ, ಏಕರೂಪ ನಾಗರಿಕ ಸಂಹಿತೆ ಜಾರಿಯ ಜಪ ಶುರು ಮಾಡಿಕೊಂಡಿದೆ.
ಶಿವಮೊಗ್ಗದಲ್ಲಿ ನಿನ್ನೆಯಷ್ಟೇ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಸುಳಿವು ನೀಡಿದ್ದ ಸಿಎಂ, ಇವತ್ತು ಕೂಡ ಅದೇ ಜಪ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡೋ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು.