ಸುರಕ್ಷತಾ ಕ್ರಮ ಕೈಗೊಳ್ಳುವುದು ಕಡ್ಡಾಯ : ಸುಧಾಕರ್

Webdunia
ಸೋಮವಾರ, 9 ಮೇ 2022 (12:24 IST)
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿ ಅಗ್ನಿ ಅವಘಡದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್  ಸೂಚನೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಅಗ್ನಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಒತ್ತು ನೀಡಲಾಗಿದೆ. ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ನಡೆದ ವೀಡಿಯೋ ಸಂವಾದದ ವೇಳೆ, ಪ್ರಧಾನಿಗಳು ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ಕ್ರಮಗಳನ್ನು ಅನುಸರಿಸುವ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದ್ದರು ಎಂದು ತಿಳಿಸಿದರು.

ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ನಂತರ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮೂಲಕ ಎಲ್ಲಾ ಆಸ್ಪತ್ರೆಗಳು ನಿರಪೇಕ್ಷಣಾ ಪತ್ರ ಪಡೆಯಬೇಕಿದೆ. ಮೇ 21ರ ತನಕ ಕಾಲಮಿತಿಯನ್ನು ಕೂಡ ನೀಡಲಾಗಿದೆ.

16 ಜಿಲ್ಲಾ ಆಸ್ಪತ್ರೆಗಳು, 150 ತಾಲೂಕು ಆಸ್ಪತ್ರೆಗಳಿಗೆ ಈಗಾಗಲೇ ಈ ಬಗ್ಗೆ ಸೂಚನೆಯನ್ನು ಕೂಡ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರಿಗೂ ರಾಜೀನಾಮೆ ನೀಡಲು ಅನುಮತಿ ಇಲ್ಲ: ಅಣ್ಣಾಮಲೈ ರಾಜೀನಾಮೆ ಬೆನ್ನಲ್ಲೇ ತಮಿಳು ಬಿಜೆಪಿ ಅಧ್ಯಕ್ಷ ಸಂದೇಶ

ನಿರ್ಮಾಪಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ನಟ ಕಿಚ್ಚ ಸುದೀಪ್‌ಗೆ ಇಂದು ಕೋರ್ಟ್‌ಗೆ ಹಾಜರಾಗಬೇಕಿದೆ

ಮತ್ತೇ ರಾಜಕೀಯದಲ್ಲಿ ಆಕ್ಟೀವ್ ಆಗಲು ಸುಮಲತಾ ಅಂಬರೀಶ್ ಪ್ಲಾನ್, ಇದರ ಹಿಂದಿದೆ ಈ ಉದ್ದೇಶ

ಮಾಲ್ವೀಯ ನಗರ ಅಗ್ನಿ ಅವಘಡ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮದುವೆಯಾಗಿ ಮನೆಬಿಟ್ಟು ಹೋಗುವ ಮಗಳಿಗೆ ತಂದೆಯೊಬ್ಬ ಭಾವನಾತ್ಮಕ ವಿದಾಯ, Video

ಮುಂದಿನ ಸುದ್ದಿ
Show comments