Select Your Language

Notifications

webdunia
webdunia
webdunia
webdunia

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

DK Shivakumar
ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ಬಳಿಕ ಕರ್ನಾಟಕದ ಮುಂದಿನ ಸಿಎಂ ಎನ್ನಲಾಗುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಇಂದು ಮಹತ್ವದ ದಿನವಾಗಿದೆ.

ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸ್ಥಾನಕ್ಕೆ ಮೊನ್ನೆ ಸಿದ್ದರಾಮಯ್ಯ ರಾಜೀನಾಮೆ ಸೂಚಿಸಿದ್ದರು. ಇದಾದ ಬಳಿಕ ಹೊಸ ಕ್ಯಾಬಿನೆಟ್ ರಚನೆ ಸಲುವಾಗಿ ನಿನ್ನೆಯಿಡೀ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರು ಚರ್ಚೆ ನಡೆಸಿದ್ದರು.

ಇದೀಗ ಎಲ್ಲವೂ ಅಂತಿಮವಾಗಿದ್ದು ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇದುವರೆಗೆ ಡಿಕೆ ಶಿವಕುಮಾರ್ ಸಿಎಂ ಎಂದು ಅಧಿಕೃತವಾಗಿ ಘೋಷಿಸಲಾಗಿಲ್ಲ. ಆದರೆ ಇಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲೇ ಸಿಎಂ ಘೋಷಣೆಯಾಗಲಿದೆ.

ಹೀಗಾಗಿ ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನವಾಗಿದೆ. ಇದಾದ ಬಳಿಕ ಅವರು ಯಾವಾಗ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವುದು ಖಚಿತವಾಗಲಿದೆ. ಮೂಲಗಳ ಪ್ರಕಾರ ಸೋಮವಾರ ಡಿಕೆಶಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಅದೆಲ್ಲವೂ ಇಂದು ಘೋಷಣೆಯಾಗಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ