Select Your Language

Notifications

webdunia
webdunia
webdunia
webdunia

2017 ನೇ ವರ್ಷ ನನಗೆ ಶ್ರಮದಾನದ ವರ್ಷ: ಕುಮಾರಸ್ವಾಮಿ

2017 ನೇ ವರ್ಷ ನನಗೆ ಶ್ರಮದಾನದ ವರ್ಷ: ಕುಮಾರಸ್ವಾಮಿ
ಬೆಂಗಳೂರು , ಶುಕ್ರವಾರ, 16 ಡಿಸೆಂಬರ್ 2016 (15:20 IST)
ಸುಭಿಕ್ಷವಾದ ರಾಜ್ಯ ಇಂದು ಸಂಕಷ್ಟದಲ್ಲಿದೆ. ಕಾಂಗ್ರೆಸ್ ಸರಕಾರದಿಂದ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ. ಸಂಕಷ್ಟ ಸ್ಥಿತಿಯಿಂದ ರಾಜ್ಯವನ್ನು ಪಾರು ಮಾಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ 2017 ನೇ ವರ್ಷ ನನಗೆ ಶ್ರಮದಾನವಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಅಭಿಪ್ರಾಯಪಟ್ಟರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಪ್ರತಿಪಕ್ಷಗಳು ಲೇವಡಿ ಮಾಡುತ್ತಿವೆ. ಪ್ರತಿಪಕ್ಷಗಳ ಲೇವಡಿಗೆ ರಾಜ್ಯದ 6.5 ಕೋಟಿ ಜನ ತಕ್ಕ ಉತ್ತರ ನೀಡುತ್ತಾರೆ. ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೇಟಿ ರಾಸಲೀಲೆ ಪ್ರಕರಣ: ಸೋನಿಯಾ ಗಾಂಧಿಗೆ ದೂರು ಸಲ್ಲಿಕೆ