ಕೆಂಪೇಗೌಡ ಬಗ್ಗೆ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ ಹೇಳಿಕೆಯ ಹಿಂದೆ ಸಿಎಂ ಸಿದ್ದರಾಮಯ್ಯ ಕೈವಾಡವಿದೆ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ಆಚರಣೆಯುಲ್ಲ. ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ ಎಂದು ಸ್ಪಷ್ಟಪಡಿಸಿದರು.
ಟಿಪ್ಪು ದಿನಾಚರಣೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು, ಆದರೆ ಕಾಂಗ್ರೆಸ್ ಸರಕಾರ ವಿರೋಧ ಲೆಕ್ಕಿಸದೆ ಆಚರಣೆಗೆ ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಡಿಕೇರಿಯಲ್ಲಿ ನಡೆದ ಗಲಭೆಗಾಗಿ ಕೇರಳದಿಂದ ದೊಡ್ಡ ಪುಂಡರು ಬಂದಿದ್ದರು.ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿಯಿರಲಿಲ್ಲ. ಕೊಡಗು ಘಟನೆಗೆ ವಿಚ್ಚಿದ್ರಕಾರಿ ಶಕ್ತಿಗಳು ಕಾರಣವಾಗಿವೆ. ಇದರಲ್ಲಿ ಬಿಜೆಪಿ ಅಥವಾ ವಿಎಚ್ಪಿ ಕೈವಾಡವಿಲ್ಲ. ಜಿಲ್ಲಾಡಳಿತದ ವೈಫಲ್ಯದಿಂದ ಘರ್ಷಣೆಗೆ ಕಾರಣವಾಗಿದೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೂಡಲೇ ಮಡಿಕೇರಿ ಘಟನೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.