Webdunia - Bharat's app for daily news and videos

Install App

ಐಟಿ ದಾಳಿಯಲ್ಲಿ ದೊರೆತಿದ್ದು ಕೇವಲ 41 ಸಾವಿರ ರೂ: ಜಾರಕಿಹೊಳಿ ಸ್ಪಷ್ಟನೆ

Webdunia
ಗುರುವಾರ, 26 ಜನವರಿ 2017 (17:55 IST)
ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ನೂರಾರು ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದಾರೆ ಎನ್ನುವ ವರದಿಗಳು ಆಧಾರರಹಿತ. ನನ್ನ ಮನೆಯಲ್ಲಿ ಕೇವಲ 41 ಸಾವಿರ ರೂಪಾಯಿಗಳು ದೊರೆತಿವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
 
ಐಟಿ ಅಧಿಕಾರಿಗಳು ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿ 162 ಕೋಟಿ ರು. ಆಸ್ತಿ, 41 ಲಕ್ಷ ರು ನಗದು ಹಾಗೂ 12 ಕೆಜಿ ಚಿನ್ನಾಭರಣ ಪತ್ತೆ ಹಚ್ಚಿದ್ದಾರೆ. ಹೀಗಾಗಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. 
 
ನನ್ನ ಮನೆಯಲ್ಲಿ ಸಿಕ್ಕಿದ್ದು 41 ಲಕ್ಷವಲ್ಲ 41 ಸಾವಿರ ರು. ಹಣ ಎಂದು ಸ್ಪಷ್ಟನೆ ನೀಡಿರುವ ಅವರು ನನ್ನ ಆಸ್ತಿಪಾಸ್ತಿಗಳ ಬಗ್ಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಬಯಸಿದರೇ ನಾನು ಸಚಿವ ಸ್ಥಾನ ತ್ಯಜಿಸುವುದಾಗಿ ಹೇಳಿರುವ ಜಾರಕಿಹೊಳಿ, ಸಿದ್ದರಾಮಯ್ಯ ನನ್ನ ರಾಜೀನಾಮೆ ಕೇಳುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments