Webdunia - Bharat's app for daily news and videos

Install App

ಮಂಡ್ಯದಲ್ಲಿ ಕೌರವರಂತಹ ಘಟಾನುಘಟಿಗಳು ಹೆಣ್ಣುಮಗಳ ಮುಂದೆ ತಲೆ ತಗ್ಗಿಸಿದ್ದಾರೆ- ಆರ್. ಅಶೋಕ್

Webdunia
ಶನಿವಾರ, 6 ಏಪ್ರಿಲ್ 2019 (14:56 IST)
ಮಂಗಳೂರು : ಮಂಡ್ಯದಲ್ಲಿ ಕೌರವರಂತಹ ಘಟಾನುಘಟಿಗಳು ಹೆಣ್ಣುಮಗಳ ಮುಂದೆ ತಲೆ ತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳುವುದರ ಮೂಲಕ ಮಾಜಿ ಡಿಸಿಎಂ ಆರ್. ಅಶೋಕ್ ಮೈತ್ರಿ ಸರ್ಕಾರದ ಕಾಲೆಳೆದಿದ್ದಾರೆ.


ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಸರ್ಕಾರವೇ ಮಂಡ್ಯದಲ್ಲಿ ಕೂತಿದೆ. ಓರ್ವ ಹೆಣ್ಣು ಮಗಳು ಅವರ ವಿರುದ್ಧ ಫೈಟ್ ಮಾಡುತ್ತಿರುವುದನ್ನು ನೋಡಿದರೆ ಸರ್ಕಾರದ ಯೋಗ್ಯತೆ ಗೊತ್ತಾಗುತ್ತೆ ಎಂದು ಲೇವಡಿ ಮಾಡಿದ್ದಾರೆ.


ಸುಮಲತಾಗೆ ನಾವು ಬೆಂಬಲ ಘೋಷಿಸಿದ್ದೇವೆ. ಅವರು ಚುನಾವಣೆಯಲ್ಲಿ ಗೆದ್ದೇ ಗೆಲುತ್ತಾರೆ. ಕಾವೇರಿ ವಿಚಾರದಲ್ಲಿ ಅಂಬರೀಶ್ ಎರಡು ವರ್ಷ ಕೇಂದ್ರ ಸಚಿವ ಸ್ಥಾನ ತ್ಯಾಗ ಮಾಡಿದ್ದಾರೆ. ಅಂತಹ ವ್ಯಕ್ತಿಯ ಶ್ರೀಮಂತರಿಗೆ ಕಿರುಕುಳ ಕೊಟ್ಟು ಅವಮಾನ ಮಾಡುತ್ತಿರುವ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲ್ಲ ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments