ಮೈಸೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿಪರಭಾರೆ ಮಾಡುತ್ತಿದವರು ಅಂದರ್

Webdunia
ಸೋಮವಾರ, 12 ಸೆಪ್ಟಂಬರ್ 2022 (20:32 IST)
ಮೈಸೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳ ಪರಭಾರೆ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.ಅಧಿಕಾರಿಗಳ ನಕಲಿ ಸೀಲ್, ಸಿಗ್ನೇಚರ್ ಪತ್ತೆಯಾಗಿದೆ. ಅಪಾರ ಪ್ರಮಾಣದ ನಕಲಿ ದಾಖಲಾತಿ ಪತ್ತೆ ಸಿಕ್ಕಿದೆ. ಮುಡಾ,ಪಾಲಿಕೆ ಸೇರಿ‌ ಸರ್ಕಾರಿ ಅಧಿಕಾರಿಗಳ ದಾಖಲಾತಿಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
 
ಭಾರೀ ವಂಚಕರ ಜಾಲ ಬಯಲಾಗಿದೆ. ಯಾರದೋ ಆಸ್ತಿಯನ್ನು ಮತ್ಯಾರಿಗೋ ಮಾರಾಟ ಮಾಡುತ್ತಿದ್ದ ಜಾಲ ನಗರದಲ್ಲಿ ಸಿಕ್ಕಿ ಬಿದ್ದಿದೆ.ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳಿಗೆ ನಕಲಿ ಮಾಲೀಕರನ್ನು ಸೃಷ್ಟಿಸಿ ಬ್ಯಾಂಕ್‍ನಲ್ಲಿ ಸಾಲ ಪಡೆಯುತ್ತಿದ್ದ ಈ ಜಾಲದ ಸದಸ್ಯರ ಬಳಿ ವಿವಿಧ ಇಲಾಖೆಗಳು ಹಾಗೂ ಅಧಿಕಾರಿಗಳ ಸೀಲ್‍ಗಳು ಪತ್ತೆಯಾಗಿವೆ.
 
ನಕಲಿ ಇ-ಸ್ಟ್ಯಾಂಪ್ ಪೇಪರ್‍ಗಳು, ಲ್ಯಾಪ್‍ಟಾಪ್, ಪ್ರಿಂಟರ್ ಹಾಗೂ ಮೊಬೈಲ್‍ಗಳ ವಶಕ್ಕೆ ಪಡೆಯಲಾಗಿದೆ.  ಈ ವಂಚಕರು ಶಾಸಕರೊಬ್ಬರ ತಂದೆಯ ಆಸ್ತಿಗೇ ನಕಲಿ ಮಾಲೀಕನನ್ನು ಸೃಷ್ಟಿಸಿ ಮಾರಾಟ ಮಾಡಿದ್ದರು.  ಈ ಸಂಬಂಧ ಮೇಟಗಳ್ಳಿ ಠಾಣೆಯಲ್ಲಿ ಕಳೆದ ಜನವರಿಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ರಾಮಕೃಷ್ಣನಗರ ವಿಶ್ವಮಾನವ ಜೋಡಿರಸ್ತೆಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್‍ಮೆಂಟ್‍ನ ಕೊಠಡಿ ಸಂಖ್ಯೆ 301ರಲ್ಲಿ ಪ್ರಕರಣದ ಕಿಂಗ್‍ಪಿನ್ ಬಂಧಿಸಲಾಗಿದೆ. ಡಿಸಿಪಿ ಪ್ರದೀಪ್‍ಗುಂಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments