Select Your Language

Notifications

webdunia
webdunia
webdunia
webdunia

ಅಬ್ ಕಿ ಬಾರ್ ಯಡಿಯೂರಪ್ಪ ಸರಕಾರ: ಸಿ.ಟಿ.ರವಿ ಘೋಷಣೆ

ಅಬ್ ಕಿ ಬಾರ್ ಯಡಿಯೂರಪ್ಪ ಸರಕಾರ: ಸಿ.ಟಿ.ರವಿ ಘೋಷಣೆ
ಬೆಂಗಳೂರು , ಶನಿವಾರ, 4 ಮಾರ್ಚ್ 2017 (16:13 IST)
ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ಇತರ ಪಕ್ಷಗಳ ಶಾಸಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ಮುಖಂಡ ಸಿ.ಟಿ,ರವಿ ತಿಳಿಸಿದ್ದಾರೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವುದಕ್ಕೆ ವಿಧಾನಪರಿಷತ್ ಸದಸ್ಯ ಗೋವಿಂದರಾಜು ಅವರ ನಿವಾಸದಲ್ಲಿ ದೊರೆತ ಡೈರಿ ಸಾಕ್ಷಿಯಾಗಿದೆ. ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಸಿಎಂ ಮತ್ತು ಅವರ ಕುಟುಂಬದ ಸದಸ್ಯರು ಲಂಚದ ಹಣ ಪಡೆದಿರುವುದು ಬಹಿರಂಗವಾಗಿದೆ ಎಂದರು.    
 
ಡೈರಿಯ ಬಗ್ಗೆ ಸಿಬಿಐ ತನಿಖೆ ನಡೆದಲ್ಲಿ ಸತ್ಯ ಸಂಗತಿ ಬಯಲಿಗೆ ಬರುತ್ತದೆ. ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ರಾಜ್ಯ ಸರಕಾರ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸದೆ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದೆ. ಇದೊಂದು ಜನವಿರೋಧಿ, ರೈತ ವಿರೋಧಿ ಸರಕಾರವಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕದಲ್ಲಿ ಮತ್ತೊರ್ವ ಭಾರತೀಯನ ಹತ್ಯೆ