Webdunia - Bharat's app for daily news and videos

Install App

ನೋಟ್‌ ಬ್ಯಾನ್‌ನಲ್ಲೂ ವಿದೇಶ ಪ್ರಯಾಣಕ್ಕೆ ತೆರಳಿದ ರಾಹುಲ್ ಗಾಂಧಿ: ಸಿಂಹ ಲೇವಡಿ

Webdunia
ಸೋಮವಾರ, 9 ಜನವರಿ 2017 (17:26 IST)
ದೇಶಾದ್ಯಂತ 500, 1000 ಮುಖಬೆಲೆಯ ನೋಟ್ ಬ್ಯಾನ್ ಆದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ 4 ಸಾವಿರ ರೂಪಾಯಿ ಹಣವನ್ನು ಬದಲಾವಣೆ ಮಾಡಿಕೊಂಡಿದ್ದರು. ಇದೀಗ ಅದೇ ಹಣದಲ್ಲಿ ವಿದೇಶ ಪ್ರಯಾಣ ಮಾಡಿ ಬಂದಿದ್ದಾರೆ. ಇದರಿಂದ ತಿಳಿಯುತ್ತೆ ರಾಹುಲ್ ಗಾಂಧಿ ಎಷ್ಟು ಸರಳ ವ್ಯಕ್ತಿ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕಾಏಕಿ ನೋಟ್ ಬ್ಯಾನ್ ಆದ ಬಳಿಕ ಸಾರ್ವಜನಿಕರಿಗೆ ತೊಂದರೆ ಆಗಿದ್ದು ನಿಜ. ಆದರೇ ಇದೀಗ ನಿಧಾನವಾಗಿ ಸಮಸ್ಯೆಗಳು ಬಗೆಹರಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರದಿಂದ ಕಾಳಧನಿಕರೂ, ರಿಯಲ್ ಎಸ್ಟೇಟ್ ಮಾಫಿಯಾಗೆ ಕಡಿವಾಣ ಬಿದ್ದಂತಾಗಿದೆ ಎಂದರು.
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ನೋಟ್ ಬ್ಯಾನ್ ನಿರ್ಧಾರವನ್ನು ಕೈಗೊಂಡಿದ್ದಾರೆ. ಮೋದಿ ಅವರ ದಿಟ್ಟ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಕಾಂಗ್ರೆಸ್ ಹೋರಾಟಕ್ಕೆ ದೇಶದ ಜನತೆ ಬೆಂಬಲ ನೀಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
 
ಏಕಾಏಕಿ ನೋಟ್ ಬ್ಯಾನ್ ಮಾಡಿದ್ದರಿಂದ ಜನಸಾಮಾನ್ಯರಿಗೆ ತೊಂದರೆ ಆಗಿದ್ದು ನಿಜ. ಆದರೆ, ತೊಂದರೆಯ ನಡುವೆಯೂ ದೇಶದ ಜನತೆ ಮೋದಿ ಅವರ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments