Webdunia - Bharat's app for daily news and videos

Install App

ನೋಟ್‌ ಬ್ಯಾನ್‌ನಲ್ಲೂ ವಿದೇಶ ಪ್ರಯಾಣಕ್ಕೆ ತೆರಳಿದ ರಾಹುಲ್ ಗಾಂಧಿ: ಸಿಂಹ ಲೇವಡಿ

Webdunia
ಸೋಮವಾರ, 9 ಜನವರಿ 2017 (17:26 IST)
ದೇಶಾದ್ಯಂತ 500, 1000 ಮುಖಬೆಲೆಯ ನೋಟ್ ಬ್ಯಾನ್ ಆದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ 4 ಸಾವಿರ ರೂಪಾಯಿ ಹಣವನ್ನು ಬದಲಾವಣೆ ಮಾಡಿಕೊಂಡಿದ್ದರು. ಇದೀಗ ಅದೇ ಹಣದಲ್ಲಿ ವಿದೇಶ ಪ್ರಯಾಣ ಮಾಡಿ ಬಂದಿದ್ದಾರೆ. ಇದರಿಂದ ತಿಳಿಯುತ್ತೆ ರಾಹುಲ್ ಗಾಂಧಿ ಎಷ್ಟು ಸರಳ ವ್ಯಕ್ತಿ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕಾಏಕಿ ನೋಟ್ ಬ್ಯಾನ್ ಆದ ಬಳಿಕ ಸಾರ್ವಜನಿಕರಿಗೆ ತೊಂದರೆ ಆಗಿದ್ದು ನಿಜ. ಆದರೇ ಇದೀಗ ನಿಧಾನವಾಗಿ ಸಮಸ್ಯೆಗಳು ಬಗೆಹರಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರದಿಂದ ಕಾಳಧನಿಕರೂ, ರಿಯಲ್ ಎಸ್ಟೇಟ್ ಮಾಫಿಯಾಗೆ ಕಡಿವಾಣ ಬಿದ್ದಂತಾಗಿದೆ ಎಂದರು.
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ನೋಟ್ ಬ್ಯಾನ್ ನಿರ್ಧಾರವನ್ನು ಕೈಗೊಂಡಿದ್ದಾರೆ. ಮೋದಿ ಅವರ ದಿಟ್ಟ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಕಾಂಗ್ರೆಸ್ ಹೋರಾಟಕ್ಕೆ ದೇಶದ ಜನತೆ ಬೆಂಬಲ ನೀಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
 
ಏಕಾಏಕಿ ನೋಟ್ ಬ್ಯಾನ್ ಮಾಡಿದ್ದರಿಂದ ಜನಸಾಮಾನ್ಯರಿಗೆ ತೊಂದರೆ ಆಗಿದ್ದು ನಿಜ. ಆದರೆ, ತೊಂದರೆಯ ನಡುವೆಯೂ ದೇಶದ ಜನತೆ ಮೋದಿ ಅವರ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments